ದಾವಣಗೆರೆ: ದೇಶದ ಜನರ ಬಹು ವರ್ಷಗಳ ಕನಸು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕೈಗೂಡುವ ಕಾಲ ಸನ್ನಿಹಿತವಾಗಿದೆ. ಕೆಲ ಸಮಯದ ಹಿಂದಷ್ಟೇ ಪ್ರಧಾನಿ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದರ ಬೆನ್ನಲ್ಲೇ, ಇದೀಗ ಕರ್ನಾಟಕದ ದಾವಣಗೆರೆ ಜಿಲ್ಲೆಯಿಂದ ಮಂದಿರ ನಿರ್ಮಾಣಕ್ಕಾಗಿ ಕಳುಹಿಸಲು 15 ಕೆ.ಜಿ. ಗಳ ಬೆಳ್ಳಿಯ ಇಟ್ಟಿಗೆ ಸಿದ್ಧವಾಗಿದೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಗಸ್ಟ್ 5, 2020 ರಂದು ನಡೆದಿದ್ದ ಶಿಲಾನ್ಯಾಸ ಕಾರ್ಯಕ್ರಮದ ಸಂದರ್ಭದಲ್ಲಿ ಜಿಲ್ಲೆಯ ಕೆಲವು ಹಿಂದೂ ಪರ ಸಂಘಟನೆಗಳು, ಬಿಜೆಪಿ ಮುಖಂಡರು ಸುಮಾರು 11 ಲಕ್ಷ ರೂ.ಗಳಲ್ಲಿ ಬೆಳ್ಳಿಯ ಇಟ್ಟಿಗೆ ತಯಾರಿಸಿ ಅಯೋಧ್ಯೆಗೆ ಕಳುಹಿಸುವ ನಿರ್ಣಯ ಕೈಗೊಂಡಿದ್ದರು. ಇದೀಗ ಇಟ್ಟಿಗೆ ನಿರ್ಮಾಣ ಕಾರ್ಯ ಸಂಪೂರ್ಣವಾಗಿದೆ. ಇದನ್ನು ಯಾವಾಗ ಅಯೋಧ್ಯೆಗೆ ಕಳುಹಿಸಲಾಗುತ್ತದೆ ಎಂಬುದರ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ.
ಈ ಇಟ್ಟಿಗೆಯಲ್ಲಿ 1990 ರ ಅಕ್ಟೋಬರ್ 9 ರಂದು ರಾಮ ಮಂದಿರ ನಿರ್ಮಾಣ ಸಂಬಂಧ ನಡೆದಿದ್ದ ರಥಯಾತ್ರೆಯ ಸಂದರ್ಭದಲ್ಲಿ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟ 8 ಜನ ಕರಸೇವಕರ ಹೆಸರು ಕೆತ್ತನೆ ಮಾಡಲಾಗಿದೆ. ಜೊತೆಗೆ ‘ಜೈ ಶ್ರೀ ರಾಮ’ ಎಂಬ ರಾಮ ಮಂತ್ರ, ತಾವರೆಯ ಚಿತ್ರವನ್ನೂ ಕೆತ್ತನೆ ಮಾಡಲಾಗಿದೆ. ಈ ಬೆಳ್ಳಿ ಇಟ್ಟಿಗೆಯನ್ನು ನಾಳೆ ನಗರದ ಆರ್. ಎಂ. ಸಿ. ರೋಡ್, ಚೌಕಿ ಪೇಟೆ, ಎಸ್ಕೆಪಿಎಸ್ ರೋಡ್ ಸೇರಿದಂತೆ ಇನ್ನಿತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುವುದು ಎಂದು ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.