ನವದೆಹಲಿ: ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಬಳಕೆ ಮತ್ತು ಕೃತಕ ಬುದ್ಧಿಮತ್ತೆ (ಎಐ)ಯ ಶಸ್ತ್ರಾಸ್ತ್ರೀಕರಣದಿಂದ ಜಗತ್ತನ್ನು ರಕ್ಷಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಒತ್ತಿ ಹೇಳಿದರು. ರೈಸ್ 2020 ಕಾನ್ಫರೆನ್ಸ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿಯಂತಹ ಕ್ಷೇತ್ರಗಳಲ್ಲಿ, ಮುಂದಿನ ಪೀಳಿಗೆಯ ನಗರ ಮೂಲಸೌಕರ್ಯ ಸೃಷ್ಟಿಯಲ್ಲಿ ಮತ್ತು ವಿಪತ್ತು ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಎಐಗೆ ದೊಡ್ಡ ಪಾತ್ರವಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅತಿದೊಡ್ಡ ವರ್ಚುವಲ್ ಜಾಗತಿಕ ಶೃಂಗಸಭೆ ‘ರೈಸ್ 2020’ ಅನ್ನು ಪಿಎಂ ಮೋದಿ ಉದ್ಘಾಟಿಸಿದರು. “ಕೃತಕ ಬುದ್ಧಿಮತ್ತೆ ಮಾನವ ಬುದ್ಧಿ ಶಕ್ತಿಯ ಗೌರವವಾಗಿದೆ. ಇತಿಹಾಸದ ಪ್ರತಿಯೊಂದು ಹಂತದಲ್ಲೂ ಭಾರತವು ಜ್ಞಾನ ಮತ್ತು ಕಲಿಕೆಯಲ್ಲಿ ಜಗತ್ತನ್ನು ಮುನ್ನಡೆಸಿದೆ” ಎಂದು ಅವರು ಹೇಳಿದರು.
“ಎಐ ಅನ್ನು ಹೇಗೆ ಬಳಸಲಾಗಿದೆ ಎಂಬುದರ ಬಗ್ಗೆ ವಿಶ್ವಾಸವನ್ನು ಖಾತ್ರಿಪಡಿಸುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ. ಈ ನಂಬಿಕೆಯನ್ನು ಸ್ಥಾಪಿಸುವಲ್ಲಿ ಪಾರದರ್ಶಕತೆ ಮುಖ್ಯವಾಗಿದೆ. ಅಷ್ಟೇ ಮುಖ್ಯವಾದ ಹೊಣೆಗಾರಿಕೆಯೂ ಅಗತ್ಯ. ಸರ್ಕಾರೇತರರ ಎಐ ಶಸ್ತ್ರಾಸ್ತ್ರೀಕರಣದ ವಿರುದ್ಧ ನಾವು ಜಗತ್ತನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದರು.
ತಂತ್ರಜ್ಞಾನವು ಪಾರದರ್ಶಕತೆ ಮತ್ತು ಸೇವಾ ವಿತರಣೆಯನ್ನು ಸುಧಾರಿಸಿದೆ ಎಂಬುದನ್ನು ಭಾರತ ಕಂಡುಕೊಂಡಿದೆ ಎಂದು ಮೋದಿ ಹೇಳಿದರು. “ಮಾನವನ AI ಕಾರ್ಯಗಳು ಭೂಮಿಗೆ ಅದ್ಭುತಗಳನ್ನು ಮಾಡಬಹುದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.