ಬೆಂಗಳೂರು: ರಾಷ್ಟ್ರೀಯ ಮಟ್ಟದ ನವೋದ್ಯಮ ಭಾರತ ಸ್ಪರ್ಧೆಯಲ್ಲಿ 36 ಪ್ರಶಸ್ತಿಗಳ ಪೈಕಿ 15 ಪ್ರಶಸ್ತಿಗಳು ಕರ್ನಾಟಕದ ಮುಡಿಗೇರಿದ್ದು, ರಾಜ್ಯ ಅಗ್ರಸ್ಥಾನಿಯಾಗಿ ಹೊರಹೊಮ್ಮಿದೆ.
ಈ ವಿಚಾರವಾಗಿ ಸಂತಸ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ಅವರು, ಕರ್ನಾಟಕದ 418 ನವೋದ್ಯಮಗಳು ಸೇರಿ ದೇಶದಾದ್ಯಂತ 1641 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಸ್ಪರ್ಧೆಯಲ್ಲಿ ರಾಜ್ಯದ 14 ನವೋದ್ಯಮಗಳು ಮತ್ತು 1 ವೇಗ ವರ್ಧಕ ಈ ಪ್ರಶಸ್ತಿಯನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುವುದಾಗಿ ಅವರು ತಿಳಿಸಿದ್ದಾರೆ.
ಈ ಪೈಕಿ 11 ನವೋದ್ಯಮಗಳು ಈ ಹಿಂದೆ ರಾಜ್ಯದಲ್ಲಿ ನವೋದ್ಯಮ ಕೋಶಗಳು ನಡೆಸಿದ್ದ ಎಲಿವೇಟ್/ಐಡಿಯಾ ಟು ಪಿಒಸಿ ಅನುದಾನಿತ ಕಾರ್ಯಕ್ರಮದಲ್ಲಿ ಜಯಗಳಿಸಿದ್ದವು ಎಂದೂ ಉಪಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.