ನವದೆಹಲಿ: ಮೊಬೈಲ್ ರೇಡಿಯೇಷನ್ ಅನ್ನು ಕಡಿಮೆ ಮಾಡಬಲ್ಲಂತಹ ಗೋವಿನ ಸೆಗಣಿಯಿಂದ ತಯಾರಿಸಿದ ಚಿಪ್ ಒಂದನ್ನು ರಾಷ್ಟ್ರೀಯ ಕಾಮಧೇನು ಆಯೋಗ ಇಂದು ಬಿಡುಗಡೆ ಮಾಡಿದೆ.
ಈ ಬಗ್ಗೆ ಮಾಹಿತಿಯನ್ನು ನೀಡಿರುವ ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಾತಿರಿಯ, “ಹಸುವಿನ ಸಗಣಿಯಿಂದ ಮೊಬೈಲ್ ರೇಡಿಯೇಷನ್ ಅನ್ನು ಕಡಿಮೆ ಮಾಡಬಹುದು ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಸಗಣಿ ಎಲ್ಲರನ್ನೂ ರಕ್ಷಿಸುತ್ತದೆ” ಎಂದಿದ್ದಾರೆ.
ಈ ರೇಡಿಯೇಶನ್ ಚಿಪ್ ಅನ್ನು ಮೊಬೈಲ್ ಫೋನ್ಗಳಲ್ಲಿ ರೇಡಿಯೇಶನ್ ಕಡಿಮೆ ಮಾಡಲು ಬಳಸಬಹುದಾಗಿದೆ. ಇದು ಕಾಯಿಲೆಯ ವಿರುದ್ಧ ರಕ್ಷಣೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಈ ಚಿಪ್ಗೆ ಗೋಸತ್ವ ಕವಚ್ ಎಂದು ಹೆಸರಿಸಲಾಗಿದೆ. ಇದನ್ನು ರಾಜಕೋಟ್ ಮೂಲದ ಶ್ರೀಜಿ ಗೋಶಾಲೆ ಉತ್ಪಾದನೆ ಮಾಡಿದೆ.
ರಾಷ್ಟ್ರೀಯ ಕಾಮಧೇನು ಆಯೋಗವನ್ನು 2019ರಲ್ಲಿ ಸ್ಥಾಪನೆ ಮಾಡಲಾಗಿದ್ದು, ಗೋವುಗಳ ಸಂರಕ್ಷಣೆ, ರಕ್ಷಣೆ ಮತ್ತು ಅಭಿವೃದ್ಧಿಯನ್ನು ಮಾಡುವ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.
ಈ ಬಾರಿ ರಾಷ್ಟ್ರೀಯ ಕಾಮಧೇನು ಆಯೋಗ ಗೋವು ಆಧಾರಿತ ದೀಪಾವಳಿಯನ್ನು ಆಚರಿಸುವ ಸಲುವಾಗಿ ರಾಷ್ಟ್ರವ್ಯಾಪಿ ಅಭಿಯಾನವನ್ನು ಹಮ್ಮಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.