ನವದೆಹಲಿ: ಉತ್ತರಪ್ರದೇಶದ ಹತ್ರಾಸ್ ಗ್ಯಾಂಗ್ರೇಪ್ ಸಂತ್ರಸ್ಥೆಯ ಕುಟುಂಬ ಸದಸ್ಯರನ್ನು ಭೇಟಿಯಾಗಲು ತೆರಳುತ್ತಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರನ್ನು ದಾರಿ ಮಧ್ಯೆ ಬಂಧನಕ್ಕೆ ಒಳಪಡಿಸಲಾಗಿತ್ತು. ಬಂಧಿತ ಪಿಎಫ್ಐ ಕಾರ್ಯಕರ್ತರ ಬೆಂಬಲಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಿಂತಿದ್ದಾರೆ ಎಂಬ ಮಾತುಗಳು ಈಗ ಕೇಳಿಬರುತ್ತಿವೆ.
ರಾಹುಲ್ ಧೋರಣೆಯನ್ನು ಖಂಡಿಸಿರುವ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ಅವರು, ಪಿಎಫ್ಐ ಕಾರ್ಯಕರ್ತರ ಕುಟುಂಬದ ಜೊತೆಗೆ ರಾಹುಲ್ ಗಾಂಧಿಯವರು ಬೆಂಬಲಕ್ಕೆ ನಿಂತಿರುವುದು ಖಂಡನಾರ್ಹವಾಗಿದೆ, ಇದರಿಂದ ಅವರ ಪಕ್ಷ ಸಂಪೂರ್ಣವಾಗಿ ಕೇರಳದ ಮುಸ್ಲಿಂ ಲೀಗ್ ಅಧೀನದಲ್ಲಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.
ಬಂಧಿತ ಪಿಎಫ್ಐ ಕಾರ್ಯಕರ್ತ ಮತ್ತು ಪತ್ರಕರ್ತನೂ ಆಗಿರುವ ಸಿದ್ದೀಕಿ ಕಪ್ಪಾನ್ ಕುಟುಂಬವನ್ನು ರಾಹುಲ್ ಗಾಂಧಿ ಭೇಟಿಯಾಗಿ ಅವರಿಗೆ ಕೆಲವು ಭರವಸೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ತನ್ನ ಲೋಕಸಭಾ ಕ್ಷೇತ್ರದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅವಲೋಕನ ಮಾಡುತ್ತಿರುವ ರಾಹುಲ್ ಅವರನ್ನು ಸಿದ್ಧೀಕಿ ಕುಟುಂಬ ಭೇಟಿಯಾಗಿದೆ ಎಂದಿದೆ.
ಹತ್ರಾಸ್ ವಿಷಯವನ್ನು ಹಿಡಿದುಕೊಂಡು ಗಲಾಟೆ ಎಬ್ಬಿಸುವ ಪಿತೂರಿಯನ್ನು ಪಿಎಫ್ಐ ಮಾಡಿತ್ತು, ಇದಕ್ಕಾಗಿ ಅದರ ಕಾರ್ಯಕರ್ತರನ್ನು ದಾರಿ ಮಧ್ಯೆ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.