ಬೆಂಗಳೂರು: ರಾಜ್ಯದಲ್ಲಿ ಕಳೆದ 2 ತಿಂಗಳುಗಳಿಂದ ಉಂಟಾಗಿರುವ ಭಾರೀ ಮಳೆ ಪ್ರವಾಹದಿಂದಾಗಿ 21,609 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿರ್ವಹಣೆಯ ದೃಷ್ಟಿಯಿಂದ ರಾಜ್ಯಕ್ಕೆ ತಕ್ಷಣದ ಪರಿಹಾರವಾಗಿ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಪತ್ರ ಮುಖೇನ ಮನವಿ ಸಲ್ಲಿಸಿದ್ದಾರೆ.
ಅ. 16 ರಂದು ನೆರೆ ಪರಿಸ್ಥಿತಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ಸಂದರ್ಭದಲ್ಲಿ ಅಗತ್ಯ ನೆರವನ್ನು ನೀಡುವ ಭರವಸೆಯನ್ನು ಮೋದಿ ನೀಡಿದ್ದಾರೆ. ಅದಾದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರವಾಹ ಪರಿಸ್ಥಿತಿ ನಿರ್ವಹಣಾ ಕಾರ್ಯಗಳಿಗೆ ಹತ್ತು ಸಾವಿರ ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ನೀಡುವಂತೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯ ಈ ವರ್ಷದಲ್ಲಿ ಮೂರು ಬಾರಿ ಪ್ರವಾಹ ಸಂಕಷ್ಟ ಅನುಭವಿಸಿದೆ. ಇದರಿಂದ 21,609 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ. ಮನೆಗಳು, ಬೆಳೆ ಸೇರಿದಂತೆ ಇನ್ನಿತರ ವಿಚಾರಗಳಲ್ಲಿಯೂ ದೊಡ್ಡ ಮಟ್ಟದ ಹಾನಿ, ನಷ್ಟ ಸಂಭವಿಸಿದೆ. ಈ ಪರಿಸ್ಥಿತಿಯನ್ನು ನಿರ್ವಹಿಸಲು ತಕ್ಷಣದ ಪರಿಹಾರವಾಗಿ 10 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.