ಬೆಂಗಳೂರು: ಕೆಲ ದಿನಗಳಿಂದ ನಗರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ನಗರ ಪ್ರದೇಶದಲ್ಲಿ ವಾಸಿಸುವ ಜನಜೀವನ ಅಸ್ತವ್ಯಸ್ತವಾಗಿದೆ. ಮಹಾ ಮಳೆಗೆ ನಗರದ ಅನೇಕ ಮನೆಗಳು ಜಲಾವೃತಗೊಂಡಿದ್ದು, ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ.
ಕಳೆದ ರಾತ್ರಿ ನಗರದ ಹೊಸ್ಕೆರೆ ಹಳ್ಳಿ ಮತ್ತು ಇಟ್ಟಮಡು ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಈ ಸಂದರ್ಭದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕ್ಲಿಷ್ಟ ಪರಿಸ್ಥಿತಿಯಲ್ಲಿ ಜನರ ಸಂಕಷ್ಟಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಹೆಗಲಾಗಿ, ರಕ್ಷಣಾ ಕಾರ್ಯ ನಡೆಸಿದ್ದಾರೆ. ಜನರು ಆಹಾರವಿಲ್ಲದೆ ಪರದಾಡುತ್ತಿರುವುದನ್ನು ಮನಗಂಡು RSS ಕಾರ್ಯಕರ್ತರು ಆಹಾರ ಒದಗಿಸುವ ನಿಟ್ಟಿನಲ್ಲಿ, ಮಕ್ಕಳಿಗೆ ಹಾಲು ಒದಗಿಸುವ ನಿಟ್ಟಿನಲ್ಲಿಯೂ ವ್ಯವಸ್ಥೆ ಕಲ್ಪಿಸಿದ್ದಾರೆ.
ರಾತ್ರಿ ಸಮಯದಲ್ಲಿ 25 ಸ್ವಯಂಸೇವಕರ ತಂಡ 550 ಆಹಾರ ಪೊಟ್ಟಣಗಳನ್ನು ಹಸಿದವರಿಗೆ ವಿತರಿಸಿದ್ದಾರೆ. ಜೊತೆಗೆ ಮಳೆಯಿಂದ ಹಾನಿಗೊಳಗಾದ 50 ಮನೆಗಳ ಸ್ವಚ್ಛತೆಯನ್ನು ರಾತ್ರಿ ವೇಳೆಯೇ ನಡೆಸಿದ್ದಾರೆ. ಇಂದು ಮುಂಜಾನೆ 30 ಮಂದಿ ಆರೆಸ್ಸೆಸ್ ಸ್ವಯಂಸೇವಕರು ಮಕ್ಕಳಿಗೆ 25 ಲೀಟರ್ ಹಾಲು, 1000 ತಿಂಡಿ ಪೊಟ್ಟಣಗಳು, 200 ಲೀಟರ್ ನೀರನ್ನು ಒದಗಿಸುವ ಮೂಲಕ ಮಾದರಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.