ನವದೆಹಲಿ: ಪಂಜಾಬಿನ ಹೋಶಿಯಾರ್ಪುರ್ ಜಿಲ್ಲೆಯಲ್ಲಿ ಆರು ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಹತ್ಯೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯನ್ನು ಖಂಡಿಸಿರುವ ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು, ಯಾಕೆ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಅವರು ಪಂಜಾಬಿಗೆ ಭೇಟಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬೇರೆ ಕಡೆಗಳಲ್ಲಿ ನಡೆಯುವ ಘಟನೆಗಳ ವಿರುದ್ಧ ಇವರಿಬ್ಬರು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತಾರೆ, ಆದರೆ ತಮ್ಮ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಕೆಟ್ಟ ಘಟನೆಗಳು ನಡೆದರೆ ಇವರು ಯಾಕೆ ಮಾತನಾಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಹೋಶಿಯಾರ್ಪುರದಲ್ಲಿ ನಡೆದ ಘಟನೆಯ ಬಗ್ಗೆ ಇದುವರೆಗೆ ಕಾಂಗ್ರೆಸ್ ಯಾವುದೇ ಒಂದು ಶಬ್ದವನ್ನು ನುಡಿದಿಲ್ಲ. ಟ್ವಿಟರ್ ಪ್ರೇಮಿ ರಾಹುಲ್ ಗಾಂಧಿ ಅವರು ಈ ಬಗ್ಗೆ ಒಂದು ಟ್ವೀಟ್ ಕೂಡ ಮಾಡಿಲ್ಲ. ಪ್ರಸ್ತುತ ಅವರಲ್ಲಿ ಆಕ್ರೋಶ ಇಲ್ಲವೇ, ರಾಜಕೀಯ ಪ್ರವಾಸ ಕೂಡ ಮಾಡುತ್ತಿಲ್ಲ ಎಂದಿದ್ದಾರೆ.
“ಕಾಂಗ್ರೆಸ್ ಪಕ್ಷ ಈಗ ಎದ್ದುನಿಂತು ಉತ್ತರ ಕೊಡಬೇಕು, ಕೇವಲ ನಿರ್ದಿಷ್ಟ ಘಟನೆಯನ್ನು ಮಾತ್ರ ಖಂಡಿಸುವುದು ಅವರಿಗೆ ಶೋಭೆ ತರುತ್ತದೆಯೇ. ಬಿಜೆಪಿ ಘಟನೆಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಸಂತ್ರಸ್ತ ಕುಟುಂಬದ ಜೊತೆಗೆ ನಿಲ್ಲುತ್ತದೆ” ಎಂದಿದ್ದಾರೆ.
The pretentious Congress has not said a word. The tweet-friendly Rahul Gandhi hasn’t tweeted on the Hoshiarpur incident. There’s been no outrage. And no picnic, either: Smt. @nsitharaman pic.twitter.com/csHlUZHPGl
— BJP (@BJP4India) October 24, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.