ಬೆಂಗಳೂರು: ರಾಜ್ಯದಲ್ಲಿ ಕನ್ನಡ ಗೊತ್ತಿಲ್ಲದ ವಲಸಿಗರನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹೊಸ ಕ್ರಮವೊಂದರ ಜಾರಿಗೆ ಮುಂದಾಗಿದೆ. ನವೆಂಬರ್ 1 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಹೊಸ ಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.
ಆನ್ಲೈನ್ ಮೂಲಕ ಕನ್ನಡ ಕಲಿಕೆಗೆ ತಂತ್ರಜ್ಞಾನವನ್ನು ಅಳವಡಿಕೆ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಜೋಡಿಸಿ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಇ – ಪೋರ್ಟಲ್ ಮೂಲಕ ಕನ್ನಡ ಕಲಿಯಲು ಆಸಕ್ತಿ ಹೊಂದಿದವರಿಗೆ ಭಾಷೆಯ ಅಧ್ಯಯನಕ್ಕೆ ಇದು ಸಹಾಯ ಮಾಡಲಿದೆ. ಈ ತಂತ್ರಜ್ಞಾನ ಈಗಾಗಲೇ ಕನ್ನಡ ಗೊತ್ತಿಲ್ಲದೆ ರಾಜ್ಯದಲ್ಲಿ ನೆಲೆಸಿರುವವರ ಜೊತೆಗೆ, ಇನ್ನಿತರರಿಗೂ ಭಾಷೆಯ ಬಗ್ಗೆ ತಿಳಿಯಲು ಸಹಕಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕನ್ನಡ ಪದಗಳ ಡಿಜಿಟಲೀಕರಣ ಪ್ರಕ್ರಿಯೆಗೆ ತಜ್ಞರು, ಬರಹಗಾರರು ಕೆಲಸ ಮಾಡುತ್ತಿದ್ದಾರೆ. ಕ್ರಮೇಣ ಈ ಪೋರ್ಟಲ್ ಮೂಲಕ ಕನ್ನಡ ಓದುವುದು ಮತ್ತು ಬರೆಯುವುದನ್ನೂ ಕಲಿಸಲಾಗುತ್ತದೆ. ಜೊತೆಗೆ ಮುಂಬರುವ ದಿನಗಳಲ್ಲಿ ಕನ್ನಡ ಇ ಪೋರ್ಟಲ್ ಮೂಲಕವೇ ವಿಜ್ಞಾನ ವಿಷಯಗಳ ಕಲಿಕೆಗೂ ಅವಕಾಶ ನೀಡಲು ಸರ್ಕಾರ ಯೋಚಿಸುತ್ತಿದೆ. ಈ ಪೋರ್ಟಲ್ ಸಂಪೂರ್ಣ ಉಚಿತ ಮತ್ತು ಬಳಕೆದಾರರ ಸ್ನೇಹಿಯಾಗಿರಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.