ನವದೆಹಲಿ: ಸಾರವರ್ಧಿತ ಅಕ್ಕಿ ವಿತರಣೆಗೆ ಸಂಬಂಧಿಸಿದಂತೆ ನಾಗರಿಕ ಸರಬರಾಜು ವ್ಯವಸ್ಥೆಯ ಮೂಲಕ 15 ರಾಜ್ಯಗಳನ್ನು ಗುರುತು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವು, ಸಾರ್ವಜನಿಕ ವಿತರಣೆಯ ಮೂಲಕ ಪ್ರಾಯೋಗಿಕ ಯೋಜನೆಯನ್ನು ಆರಂಭ ಮಾಡಿದ್ದು, ಈ ಹಿನ್ನೆಲೆಯಲ್ಲಿ 15 ರಾಜ್ಯಗಳನ್ನು ಗುರುತು ಮಾಡಿರುವುದಾಗಿಯೂ ಮಾಹಿತಿ ನೀಡಿದೆ. ಈ ಯೋಜನೆಯನ್ನು ಮೂರು ವರ್ಷಗಳ ಅವಧಿಗೆ ಎಂಬಂತೆ, ಸುಮಾರು 174.6.ಕೋಟಿ ರೂ. ವೆಚ್ಚದ ಮೂಲಕ ಅನುಮೋದನೆ ನೀಡಲಾಗಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಯೋಜನೆಯ ಅನುಷ್ಠಾನಕ್ಕಾಗಿ 15 ರಾಜ್ಯಗಳನ್ನು ಗುರುತು ಮಾಡಲಾಗಿದೆ. ಪ್ರತಿ ರಾಜ್ಯದ ಒಂದು ಜಿಲ್ಲೆಗೆ ಈ ಯೋಜನೆಯನ್ನು ಪ್ರಾಯೋಗಿಕ ಹಂತದಲ್ಲಿ ಪರಿಚಯಿಸಲಾಗುತ್ತಿದೆ. ಈಗಾಗಲೇ ಗುಜರಾತ್, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಛತ್ತೀಸ್ಗಢ ರಾಜ್ಯಗಳು ನಿಗದಿಪಡಿಸಿದ ಜಿಲ್ಲೆಯಲ್ಲಿ ಸಾರವರ್ಧಿತ ಅಕ್ಕಿಯನ್ನು ವಿತರಣೆ ಮಾಡಲು ತೊಡಗಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಸಾರ ವರ್ಧಿತ ಅಕ್ಕಿ ವಿತರಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 30 ರಂದು ಸಚಿವ ಪೀಯೂಷ್ ಗೋಯಲ್ ಸಾರಥ್ಯದಲ್ಲಿ ಪರಿಶೀಲನಾ ಸಭೆ ನಡೆಸಲಾಗಿದ್ದು, ಈ ಸಂದರ್ಭ ದೇಶದಲ್ಲಿ ಸಾರವರ್ಧಿತ ಅಕ್ಕಿ ವಿತರಣೆಗೆ ಒತ್ತು ನೀಡುವಂತೆ ಅಭಿಪ್ರಾಯ ವ್ಯಕ್ತವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.