ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ನ. 19 ರಿಂದ 21 ರ ವರೆಗೆ ನಡೆಯಲಿರುವ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು’ ವರ್ಚುವಲ್ ಕಾರ್ಯಕ್ರಮದ ಮೂಲಕ ಆಯೋಜನೆ ಮಾಡಲಾಗುತ್ತಿದ್ದು, ಈ ಸಮಾರಂಭವನ್ನು ಪ್ರಧಾನಿ ಮೋದಿ ಅವರು ವರ್ಚುವಲ್ ಆಗಿ ಉದ್ಘಾಟನೆ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದ ಐಟಿ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಈ ಶೃಂಗಸಭೆ ನಡೆಯಲಿದೆ. ಇದರಲ್ಲಿ ಸುಮಾರು 25 ಕ್ಕೂ ಅಧಿಕ ದೇಶಗಳ ತಂತ್ರಜ್ಞರು ಭಾಗವಹಿಸುವ ನಿರೀಕ್ಷೆ ಇದೆ. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ವರ್ಚುವಲ್ ಶೃಂಗಸಭೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದರಲ್ಲಿ 250 ಕ್ಕೂ ಅಧಿಕ ವಿಷಯಗಳಲ್ಲಿ ಪರಿಣತಿ ಪಡೆದವರು ಭಾಗವಹಿಸಲಿದ್ದಾರೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.
ಪ್ರಮುಖ ಕಂಪೆನಿಗಳ ಸುಮಾರು 250 ಕ್ಕೂ ಅಧಿಕ ಪ್ರದರ್ಶಕರು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದ 4 ಸಾವಿರಕ್ಕೂ ಅಧಿಕ ತಂತ್ರಜ್ಞಾನವನ್ನು 20 ಸಾವಿರಕ್ಕೂ ಅಧಿಕ ಉದ್ಯಮಿಗಳಿಗೆ ಪರಿಚಯಿಸಲಿದೆ ಎಂದು ಅವರು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ಮುಖ್ಯ ತಂಡಗಳ ಮುನ್ನೋಟದಂತೆ, ಸಮರ್ಥ ಮಾರ್ಗದರ್ಶನದಡಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.