ಬೆಂಗಳೂರು: ರಾಜ್ಯದೆಲ್ಲೆಡೆ ಸೇವೆ ಒದಗಿಸುತ್ತಿರುವ 108 ಆಂಬ್ಯುಲೆನ್ಸ್ ಸೇವೆಯ ವ್ಯವಸ್ಥೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವ ದೃಷ್ಟಿಯಿಂದ ಕೆಲವೊಂದು ಬದಲಾವಣೆ ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ತುರ್ತು ಸೇವೆ ಒದಗಿಸುವ ನಿಟ್ಟಿನಲ್ಲಿ 108 ಆಂಬ್ಯುಲೆನ್ಸ್ ಸೇವೆಗಳು ಹೆಚ್ಚು ಪೂರಕವಾಗಿವೆ. ಆದರೂ ಈ ಸೇವೆಯಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತು ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಮತ್ತೊಂದಷ್ಟು ಬದಲಾವಣೆಗಳನ್ನು ತರಲಾಗುವುದು ಎಂದು ಅವರು ಹೇಳಿದ್ದಾರೆ.
108 ಆಂಬ್ಯುಲೆನ್ಸ್ ಸೇವೆಗೆ ರಾಜ್ಯ ಸರ್ಕಾರ ಹೆಚ್ಚು ಹಣ ಬಳಕೆ ಮಾಡುತ್ತದೆ. ಆದರೆ ಅಷ್ಟರ ಮಟ್ಟಿಗೆ ಸೇವೆ ಮಾತ್ರ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೇಶಕ್ಕೆ ಮಾದರಿಯಾಗುವಂತಹ ಸೇವೆಯನ್ನು ಈ ಆಂಬ್ಯುಲೆನ್ಸ್ಗಳಿಂದ ದೊರೆಯುವಂತೆ ಮಾಡುವ ಉದ್ದೇಶವನ್ನಿಟ್ಟುಕೊಂಡು ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಅದರನ್ವಯ ಮುಂದಿನ ಬಾರಿಯ ಗುತ್ತಿಗೆಯಲ್ಲಿಯೂ ಲೋಪವಾಗದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.