ವಿಶ್ವಸಂಸ್ಥೆ: ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಂಗಸಂಸ್ಥೆಯಾದ ಆಡಳಿತಾತ್ಮಕ ಹಾಗು ಹಣಕಾಸು ಪ್ರಶ್ನೆಗಳ ಸಲಹಾ ಸಮಿತಿಗೆ ಭಾರತದ ರಾಜತಾಂತ್ರಿಕ ಅಧಿಕಾರಿ ವಿದಿಶಾ ಮೈತ್ರಾ ಅವರು ಆಯ್ಕೆಯಾಗಿದ್ದಾರೆ.
ಇವರು 126 ಮತಗಳನ್ನು ಪಡೆದಿದ್ದು ಏಷ್ಯಾ ಫೆಸಿಫಿಕ್ ಭಾಗದಿಂದ ಈ ಸಲಹಾ ಸಮಿತಿಗೆ ಆಯ್ಕೆಯಾದ ಮೊದಲ ಭಾರತೀಯ ಪ್ರಜೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಭೌಗೋಳಿಕ ಪ್ರಾತಿನಿಧ್ಯ, ವೈಯಕ್ತಿಕ ಅರ್ಹತೆ ಅನುಭವಗಳನ್ನು ಪರಿಗಣಿಸಿ ಈ ನೇಮಕಾತಿಯನ್ನು ನಡೆಸಲಾಗುತ್ತಿದೆ. 193 ಸದಸ್ಯರನ್ನು ಒಳಗೊಂಡ ಸಾಮಾನ್ಯ ಸಭೆಯು ಸದಸ್ಯರ ನೇಮಕಾತಿ ಪ್ರಕ್ರಿಯೆಯನ್ನು ಮಾಡುತ್ತಿದೆ.
ಸದ್ಯ ಇದರ ಸದಸ್ಯರಾಗಿರುವ ವಿದಿಶಾ ಮೈತ್ರಾ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಕಾರ್ಯನಿರ್ವಹಿಸಲಿದ್ದಾರೆ. 2021 ರ ಜನವರಿ 1ರಂದು ಅವರ ಅಧಿಕಾರಾವಧಿ ಆರಂಭವಾಗಲಿದೆ. ಭಾರತವು ಭದ್ರತಾ ಮಂಡಳಿಯಲ್ಲಿ ಖಾಯಂ ಅಲ್ಲದ ಸದಸ್ಯ ದೇಶವಾಗಿರುವ ಬೆನ್ನಲ್ಲೇ ಮೈತ್ರಾ ಅವರು ವಿಶ್ವಸಂಸ್ಥೆಯ ಸಲಹಾ ಸಮಿತಿಗೆ ನೇಮಕವಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.