ಬೆಂಗಳೂರು: ರಾಜ್ಯದ ಜನರ ಅನುಕೂಲಕ್ಕಾಗಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನ. 13 ಮತ್ತು 14 ರಂದು 1 ಸಾವಿರ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರಿ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿ ಮುಂದಾಗಿದೆ.
ಅಂತರರಾಜ್ಯ ಮತ್ತು ಕರ್ನಾಟಕದ ಹಲವು ಭಾಗಗಳಿಗೆ ಸಂಬಂಧಿಸಿದಂತೆ ಈ ಬಸ್ಸುಗಳು ಕಾರ್ಯಾಚರಣೆ ನಡೆಸಲಿರುವುದಾಗಿ ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ. ಬೆಂಗಳೂರಿನ ಕೆಂಪೇಗೌಡ ನಿಲ್ದಾಣದಿಂದ ಧರ್ಮಸ್ಥಳ , ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ಹಾಸನ, ಹುಬ್ಬಳ್ಳಿ, ಧಾರವಾಡ ,ಕುಂದಾಪುರ, ಹೊರನಾಡು, ಶೃಂಗೇರಿ, ದಾವಣಗೆರೆ, ಬೆಳಗಾವಿ, ವಿಜಯಪುರ, ಶಿರಸಿ, ಗೋಕರ್ಣ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ ,ಯಾದಗಿರಿ, ಬೀದರ, ತಿರುಪತಿಗಳಿಗೆ ವಿಶೇಷ ಬಸ್ಸು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಂಸ್ಥೆ ಮಾಹಿತಿ ನೀಡಿದೆ.
ಇನ್ನು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ಸು ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಸೇರಿದಂತೆ ಇನ್ನೂ ಹಲವು ಪ್ರದೇಶಗಳಿಗೆ KSRTC ವಿಶೇಷ ಬಸ್ಸುಗಳ ಸಂಚಾರ ಇರಲಿದೆ. ಹಾಗೆಯೇ ಬೆಂಗಳೂರಿನ ಶಾಂತಿನಗರದಿಂದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೊಟ್ಟಾಯಂ ಮೊದಲಾದೆಡೆಗಳಿಗೆ ವಿಶೇಷ ಬಸ್ಸು ಸೇವೆಗಳಿವೆ. ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಸುಗಳು ಸಂಚಾರ ನಡೆಸಲಿವೆ ಎಂದು ಸಂಸ್ಥೆ ಹೇಳಿದೆ.
ದೀಪಾವಳಿ ಮುಗಿದ ಬಳಿಕ ನ.16 ರಂದು ಸಹ ರಾಜ್ಯ, ಅಂತರರಾಜ್ಯಗಳಿಗೆ ಹೆಚ್ಚಿನ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುವುದು. ಇವೆಲ್ಲವುಗಳಿಗೂ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಇದ್ದು, www.ksrtc.in ಹಾಗೂ ರಾಜ್ಯ, ಅಂತರರಾಜ್ಯ ಬಸ್ಸುಗಳ ಮುಂಗಡ ಬುಕ್ಕಿಂಗ್ ಕೌಂಟರ್ನಲ್ಲಿ ಟಿಕೆಟ್ ಕಾಯ್ದಿರಿಸಬಹುದಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.