ನವದೆಹಲಿ: ಭಾರತಕ್ಕೆ ಅಕ್ರಮವಾಗಿ ಒಳನುಸುಳುವವರು ಯಾರೂ ಬದುಕುಳಿಯಲಾರರು ಎಂದು ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾನೆ ಗುರುವಾರ ಪಾಕಿಸ್ಥಾನಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿ ನಡೆಸಿದ ನಾಲ್ಕು ಜೈಶೇ ಮೊಹಮ್ಮದ್ ಉಗ್ರರನ್ನು ನಿನ್ನೆ ಸಂಹಾರ ಮಾಡಲಾಗಿದೆ. ಟ್ರಕ್ನಲ್ಲಿ ಅಡಗಿಕೊಂಡಿದ್ದ ಈ ಭಯೋತ್ಪಾದಕರು ಗುರುವಾರ ಮುಂಜಾನೆ ಕೇಂದ್ರಾಡಳಿತ ಪ್ರದೇಶದ ಹೆದ್ದಾರಿಯಲ್ಲಿರುವ ಬಾನ್ ಟೋಲ್ ಪ್ಲಾಜಾ ಬಳಿ ಹತ್ಯೆಗೀಡಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಪಾಕಿಸ್ಥಾನ ಮತ್ತು ಅದರ ಭಯೋತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿರುವ ನರವಾನೆ, “ಭಾರತಕ್ಕೆ ಒಳನುಸುಳಲು ಯಾರಾದರೂ ದುಸ್ಸಾಹಸ ಮಾಡಿದರೆ ಅವರಿಗೆ ತಕ್ಕ ಪ್ರತಿಕ್ರಿಯೆ ನೀಡಲಾಗುವುದು ಮತ್ತು ಅವರೆಂದೂ ತಮ್ಮ ನೆಲಕ್ಕೆ ಮತ್ತೆ ಹಿಂದಿರುಗಲು ಸಾಧ್ಯವಾಗುವುದಿಲ್ಲ” ಎಂದಿದ್ದಾರೆ.
ಸೇಬು ತುಂಬಿದ ಟ್ರಕ್ನಲ್ಲಿ ಅಡಗಿದ್ದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ ಸೈನಿಕರಿಗೆ ಸೇನಾ ಮುಖ್ಯಸ್ಥರು ಪ್ರಶಂಸೆ ವ್ಯಕ್ತಪಡಿಸಿದರು. ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಅರೆಸೈನಿಕ ಪಡೆಗಳ ನಡುವೆ ಸಾಕಷ್ಟುಸಮನ್ವಯ ಇದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.