ನವದೆಹಲಿ: ನಾವು ಅಖಂಡ ಭಾರತದ ಮೇಲೆ ಬಲವಾದ ನಂಬಿಕೆಯನ್ನು ಇಟ್ಟುಕೊಂಡಿದ್ದೇವೆ, ಒಂದು ದಿನ ಕರಾಚಿ ಕೂಡ ಭಾರತದ ಭಾಗವಾಗುತ್ತದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ.
‘ಕರಾಚಿ’ ಎಂಬ ಹೆಸರಿನ ಸಿಹಿತಿಂಡಿ ಅಂಗಡಿಗೆ ನುಗ್ಗಿದ ಶಿವಸೇನೆ ಕಾರ್ಯಕರ್ತನೊಬ್ಬ ಅಂಗಡಿ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
“ನಾವು ಅಖಂಡ ಭಾರತದ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿದ್ದೇವೆ, ಒಂದು ದಿನ ಕರಾಚಿ ಕೂಡ ಭಾರತದ ಭಾಗವಾಗುತ್ತದೆ” ಎಂದಿದ್ದಾರೆ.
“ಕರಾಚಿ ಅಂಗಡಿ ಹೆಸರನ್ನು ಬದಲಾಯಿಸುವಂತೆ ಶಿವಸೇನೆ ಕಾರ್ಯಕರ್ತರು ನಡೆಸಿದ ದಾಂಧಲೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು, “ಕರಾಚಿ ಸ್ವೀಟ್ಸ್ & ಕರಾಚಿ ಬೇಕರಿ ಮುಂಬೈಯಲ್ಲಿ 60 ವರ್ಷಗಳಿಂದ ಇದೆ. ಪಾಕಿಸ್ಥಾನಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅದರ ಹೆಸರನ್ನು ಈಗ ಬದಲಾಯಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಕಾರ್ಯಕರ್ತನ ಒತ್ತಾಯ ಶಿವಸೇನೆಯ ಅಧಿಕೃತ ನಿಲುವಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.