ಬೆಂಗಳೂರು: 2020-21 ನೇ ವರ್ಷವನ್ನು ರಾಜ್ಯ ಸರ್ಕಾರ ಕನ್ನಡ ಕಾಯಕ ವರ್ಷವಾಗಿ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಕನ್ನಡದಲ್ಲೇ ವ್ಯವಹರಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.
ಈ ಸುತ್ತೋಲೆಯಲ್ಲಿ ಕನ್ನಡದಲ್ಲಿ ತಂತ್ರಾಂಶವನ್ನು ಯಶಸ್ವಿಯಾಗಿ ಬಳಕೆ ಮಾಡಲು ಕಾರ್ಯಕ್ರಮ ರೂಪಿಸುವುದು, ಇಲಾಖೆಯ ನೀತಿಗಳನ್ನು, ಕರಡು ಪ್ರತಿಗಳನ್ನು ಕನ್ನಡದಲ್ಲಿಯೇ ಸಿದ್ಧಪಡಿಸಿ, ಅನುಮೋದಿತ ಅಂತಿಮ ಪ್ರತಿಯನ್ನು ಕನ್ನಡದಲ್ಲಿ ಸಿದ್ಧಪಡಿಸುವುದು, ತಂತ್ರಾಂಶ ವ್ಯವಸ್ಥೆಯ ಮೂಲಕ ಅರ್ಜಿದಾರರಿಗೆ ಕನ್ನಡದಲ್ಲಿಯೇ ಸಂದೇಶ ರವಾನೆ ಮಾಡುವಂತೆ ಸೂಚಿಸಲಾಗಿದೆ.
ಅದರೊಂದಿಗೆ ಕರ್ನಾಟಕದ ನಗರ, ಪಟ್ಟಣಗಳ ಹೆಸರುಗಳನ್ನು ಕನ್ನಡದಲ್ಲಿಯೇ ಬರೆಯುವುದು, ಮೈಲುಗಲ್ಲುಗಳ ಮೇಲೆ ಕನ್ನಡದಲ್ಲೇ ಅಂಕಿ, ಅಕ್ಷರಗಳನ್ನು ಬಳಕೆ ಮಾಡುವುದು, ರಾಜ್ಯದ ಎಲ್ಲಾ ಇಲಾಖೆಗಳ ಪ್ರಧಾನ, ಒಳ ಪುಟಗಳು, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡದ ಬಳಕೆ, ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆಗೆ ಒತ್ತಾಯ ಸೇರಿದಂತೆ ಇನ್ನಿತರ ಕನ್ನಡ ಸ್ನೇಹಿ ಹಲವು ವಿಚಾರಗಳನ್ನು ಇದರಲ್ಲಿ ತಿಳಿಸಿದ್ದಾರೆ.
ಅದರೊಂದಿಗೆ ನಿಗಮ ಮಂಡಳಿಗಳು, ಸರ್ಕಾರದಿಂದ ಅನುದಾನ ಪಡೆಯುವ ಎಲ್ಲಾ ಸಂಘ ಸಂಸ್ಥೆಗಳ ವಾರ್ಷಿಕ ವರದಿಗಳನ್ನು, ಆಯವ್ಯಯ ದಾಖಲೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲೇ ಬಳಕೆ ಮಾಡುವಂತೆಯೂ ಇದರಲ್ಲಿ ಸೂಚಿಸಲಾಗಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕನ್ನಡದಲ್ಲೇ ಸಾರ್ವಜನಿಕ ಮಾಹಿತಿ ಒದಗಿಸುವಂತೆ ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಜಿಲ್ಲೆಯ ಪ್ರಮುಖ ರಸ್ತೆಗಳಿಗೆ ಸಾಹಿತಿಗಳ, ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನಿಡುವಂತೆಯೂ ಈ ಸುತ್ತೋಲೆಯಲ್ಲಿ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.