ನವದೆಹಲಿ: ನವದೆಹಲಿಯ ಶಕರ್ಪುರ ಪ್ರದೇಶದಲ್ಲಿ ಕನಿಷ್ಠ ಐದು ಭಯೋತ್ಪಾದಕರನ್ನು ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿದೆ.
ವರದಿಗಳ ಪ್ರಕಾರ, ಬಂಧಿತ ಭಯೋತ್ಪಾದಕರು ಯಾವ ಸಂಘಟನೆಗೆ ಸೇರಿದವರು ಎಂಬುದು ತಿಳಿದು ಬಂದಿಲ್ಲ. ಇವರಲ್ಲಿ ಮೂವರು ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದವರಾಗಿದ್ದರೆ, ಉಳಿದ ಇಬ್ಬರು ಪಂಜಾಬ್ ಮೂಲದವರು ಎನ್ನಲಾಗಿದೆ.
ವಿಶೇಷ ಘಟಕದ ಅಧಿಕಾರಿಗಳೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶಸ್ತ್ರಾಸ್ತ್ರಗಳು ಮತ್ತು ಇತರ ಅಕ್ರಮ ವಸ್ತುಗಳನ್ನು ಇವರಿಂದ ವಶಪಡಿಸಿಕೊಳ್ಳಲಾಗಿದೆ.
ದೆಹಲಿ ಪೊಲೀಸರ ತಂಡವು ಪ್ರಮುಖ ಭಯೋತ್ಪಾದಕ ಸಂಚನ್ನು ಛೇದಿಸಿ ರಾಷ್ಟ್ರ ರಾಜಧಾನಿಯ ಖಾನ್ ಮಾರ್ಕೆಟ್ ಪ್ರದೇಶದ ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಸುಮಾರು 20 ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಪೊಲೀಸರು ಎರಡು ಅರೆ-ಸ್ವಯಂಚಾಲಿತ ಪಿಸ್ತೂಲ್ಗಳನ್ನು, 10 ಲೈವ್ ಕಾರ್ಟ್ರಿಜ್ಗಳನ್ನು ವಶಪಡಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.