ಬೆಂಗಳೂರು: ಕೊರೋನಾ ಸೋಂಕು ಈಗಾಗಲೇ ರಾಜ್ಯವನ್ನು ಕಂಗೆಡಿಸಿದೆ. ಇದೀಗ ಕೊರೋನಾ ಸೋಂಕು ರೂಪಾಂತರದ ವಿಚಾರ ಇಡೀ ದೇಶ ಮತ್ತು ರಾಜ್ಯದ ಜನರ ನಿದ್ದೆಗೆಡಿಸಿದೆ. ಚೆನ್ನೈಗೆ ಆಗಮಿಸಿರುವ ವ್ಯಕ್ತಿಯಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಹೀಗಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮವನ್ನು ಅನುಸರಿಸಿದಲ್ಲಿ ಮಾತ್ರವೇ ಇದರಿಂದ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯದೊಳಕ್ಕೆ ಹೊರಗಿನಿಂದ ಯಾರೇ ಆಗಮಿಸಿದರೂ ವಿಮಾನ ನಿಲ್ದಾಣದಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಿಯೇ ಒಳಕ್ಕೆ ಬಿಡಲಾಗುತ್ತದೆ. ದೇಶದೆಲ್ಲೆಡೆ ಈಗಾಗಲೇ ಕೊರೋನಾ ಸಂಬಂಧಿಸಿದಂತೆ ಬಿಗಿ ಅಲರ್ಟ್ ಇದ್ದು, ರಾಜ್ಯದಲ್ಲಿ ಯಾವ ಕಾರಣಕ್ಕೂ ಕೊರೋನಾ ಹರಡದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹಿತ ಕಠಿಣ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸೂಚಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಹೊಸ ವರ್ಷ ಆಚರಣೆಗೆ ಯಾವುದೇ ಅವಕಾಶ ಇಲ್ಲ. ಆದರೆ ನಮ್ಮ ರಾಜ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯ ಸದ್ಯಕ್ಕಿಲ್ಲ. ಆದ್ದರಿಂದ ಹೆಚ್ಚಿನ ಎಚ್ಚರಿಕೆ ವಹಿಸುವ ಮೂಲಕವೇ ಕೊರೋನಾ ನಿಯಂತ್ರಣದತ್ತ ಚಿತ್ತ ಹರಿಸಬೇಕಿದೆ ಎಂದು ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.