ಬೆಂಗಳೂರು: ಪಿಎಫ್ಐನವರ ಆಟ ನಡೆಯುವ ಕಾಲ ಮುಗಿದಿದೆ. ಈಗ ಬಾಲ ಬಿಚ್ಚಿದರೆ ಬಾಲ ಕತ್ತರಿಸಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಚೇರಿಯ ಮೇಲೆ ಪಿಎಫ್ಐ ಕಾರ್ಯಕರ್ತರ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಕ್ರಮ ಹಣ ಚಲಾಯಿಸಬಹುದು, ಆದರೆ ED ತನಿಖೆ ನಡೆಯಬಾರದು ಎಂದರೆ ಹೇಗೆ?, ಬೇಡ ಎಂದು ಹೇಳಲು ಪಿಎಫ್ಐಯ ಸದಸ್ಯರು ಯಾರು ಎಂದು ಪ್ರಶ್ನಿಸಿದ್ದಾರೆ.
ಕೆಲ ಸಮಯದ ಹಿಂದೆ ನವದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಗೆ ದೇಶವಿದೇಶಗಳಿಂದಲೂ ಫಂಡಿಂಗ್ ಆದ ಮಾಹಿತಿ ಇದೆ. ಈ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇದು ಪಿಎಫ್ಐನವರಿಗೆ ಉರಿಯುತ್ತಿದೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿದ ಪರಿಸ್ಥಿತಿ ಪಿಎಫ್ಐ ಸಂಘಟನೆಯವರದ್ದಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತ ಅರಾಜಕತೆಗಲ್ಲ ಇರುವುದು. ಇಲ್ಲಿ ಭಯೋತ್ಪಾದನೆ ಮಾಡಲು ಅವಕಾಶವಿಲ್ಲ. ಇಂತಹ ಅಕ್ರಮಗಳಿಗೆ ವಿದೇಶದಿಂದ ಫಂಡಿಂಗ್ ಬರುತ್ತಿದೆ. ಇಂತಹ ಅಕ್ರಮಗಳನ್ನು ತಡೆಯಲು ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕಿದೆ. ಆ ಮೂಲಕ ಇವರ ದುರುದ್ದೇಶ ಜಗಜ್ಜಾಹೀರಾಗಬೇಕಿದೆ ಎಂದು ಸಿ. ಟಿ. ರವಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.