ರಾಮತೀರ್ಥಂ: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ನೆಲ್ಲಿಮಾರ್ಲಾ ಮಂಡಲದ ರಾಮತೀರ್ಥ ಗ್ರಾಮದಲ್ಲಿ 400 ವರ್ಷಗಳಷ್ಟು ಹಳೆಯದಾದ ಕೋದಂಡ ರಾಮ ದೇವಸ್ಥಾನವನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಜಿಲ್ಲೆಗೆ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರು ಆಗಮಿಸುವುದಕ್ಕೆ ಒಂದು ದಿನಗಳ ಮುಂಚಿತವಾಗಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ.
ಮಂಗಳವಾರ ಗ್ರಾಮದ ಸಮೀಪವಿರುವ ಬೋಡಿ ಕೊಂಡಾ (ಬೆಟ್ಟ) ದಲ್ಲಿರುವ ಕೋದಂಡ ರಾಮ ದೇವಸ್ಥಾನದಲ್ಲಿರುವ ಶ್ರೀರಾಮ ವಿಗ್ರಹಕ್ಕೆ ಹಾನಿಯಾಗಿದ್ದು ಸ್ಥಳೀಯರ ಗಮನಕ್ಕೆ ಬಂದಿದೆ.
ಆದರೆ ಮರುದಿನ ಶ್ರೀರಾಮನ ಪ್ರತಿಮೆಗೆ ಹಾನಿಯಾಗಿರುವುದು ಮತ್ತು ವಿಗ್ರಹದಿಂದ ತಲೆಯನ್ನು ಬೇರ್ಪಡಿಸಿದ್ದು ಗೋಚರಿಸಿದೆ, ವಿಗ್ರಹದ ತಲೆಯನ್ನು ಎಲ್ಲೋ ಕಾಡಿನಲ್ಲಿ ಎಲ್ಲೋ ಎಸೆಯಲಾಗಿದೆಯೆಂದು ಶಂಕಿಸಲಾಗಿದೆ.
ಮಾಹಿತಿ ಪಡೆದ ನಂತರ ಸ್ಥಳೀಯರು ದೇವಸ್ಥಾನಕ್ಕೆ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಎಸ್ಪಿ ಬಿ.ರಾಜಕುಮಾರಿ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಘಟನೆಯಲ್ಲಿ ಕೆಲವು ದುಷ್ಕರ್ಮಿಗಳು ಭಾಗಿಯಾಗಿರಬಹುದು ಎಂದು ಶಂಕಿಸಿದ್ದಾರೆ. ತನಿಖೆಯನ್ನು ಪ್ರಾರಂಭಿಸಲಾಗಿದೆ.
ಇನ್ನೊಂದು ಕಡೆ ಈ ವಿಷಯ ರಾಜಕೀಯ ಪಕ್ಷಗಳ ಗಮನ ಸೆಳೆದಿದೆ. ಮಾಹಿತಿ ಪಡೆದ ನಂತರ ಸ್ಥಳೀಯ ತೆಲುಗು ದೇಶಂ ಮುಖಂಡರಾದ ಎಸ್.ರವಿಸೇಖರ್ ಮತ್ತು ಇತರರು ದೇವಸ್ಥಾನಕ್ಕೆ ಧಾವಿಸಿ ಬೆಟ್ಟದಲ್ಲಿ ಧರಣಿ ನಡೆಸಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ದೇವಾಲಯಗಳಿಗೆ ಭದ್ರತೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಪಾವನಿ ಮತ್ತು ಇತರರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ಧರಣಿ ನಡೆಸಿ ಕ್ರೂರ ಘಟನೆಯನ್ನು ಖಂಡಿಸಿ ಅಪರಾಧಿಗಳನ್ನು ಪತ್ತೆ ಹಚ್ಚಿ ದೇವಾಲಯವನ್ನು ಸುರಕ್ಷಿತವಾಗಿ ಕಾಪಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇನ್ನೊಂದು ಕಡೆ ನೆಲ್ಲಿಮಾರ್ಲಾ ಶಾಸಕ ಬಿ.ಅಪ್ಪಲಾ ನಾಯ್ಡು ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ರಾಮತೀರ್ಥಂ ಪರಿಕ್ಷಾನ ಪರಿಷತ್ನ ಅಧ್ಯಕ್ಷರಾದ ಶ್ರೀನಿವಾಸಂದ ಸ್ವಾಮಿ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ, ಇದು ಅವಮಾನಕರ ಘಟನೆ ಮತ್ತು ಭಕ್ತರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರ ಶೀಘ್ರವಾಗಿ ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಬೇಕು ಮತ್ತು ರಾಜ್ಯದ ಎಲ್ಲಾ ದೇವಾಲಯಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.