ಬೆಂಗಳೂರು: 2020 ರ ಡಿಸೆಂಬರ್ 28, 29 ರಂದು ದೇಶದ 4 ರಾಜ್ಯಗಳಲ್ಲಿ ನಡೆದಿದ್ದ ಕೊರೋನಾ ಲಸಿಕೆ ವಿತರಣೆ ತಾಲೀಮನ್ನು 2021 ಜ. 2 ರಂದು ಎಲ್ಲಾ ರಾಜ್ಯಗಳಲ್ಲಿ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿನ 5 ಜಿಲ್ಲೆಗಳಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ರಾಜ್ಯದ ಬೆಂಗಳೂರು, ಕಲ್ಬುರ್ಗಿ, ಬೆಳಗಾವಿ, ಶಿವಮೊಗ್ಗ, ಮೈಸೂರುಗಳಲ್ಲಿ ಈ ತಾಲೀಮು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾ ಮಟ್ಟದಲ್ಲಿ ಒಂದು ತಾಲೂಕಿನಲ್ಲಿ ಒಂದು ಲಸಿಕೆ ವಿತರಣಾ ಕೇಂದ್ರ ಇರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಈ ಲಸಿಕೆಯನ್ನು ಆದ್ಯತೆಯ ಅನುಸಾರ ಕೊರೋನಾ ವಾರಿಯರ್ಸ್ಗೆ ವಿತರಣೆ ಮಾಡಲಾಗುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದ್ಯತೆಯನ್ವಯ ಕೊರೋನಾ ಲಸಿಕೆ ನೀಡಲು ಅಪ್ಲಿಕೇಶನ್ಗಳನ್ನು ಭರ್ತಿ ಮಾಡಲಾಗಿದೆ. ಈ ತಾಲೀಮಿನಲ್ಲಿ ಅಪ್ಲಿಕೇಶನ್ ಬಳಕೆ, ಕಾರ್ಯಸಾಧ್ಯತೆ ಮತ್ತು ಸಂಪರ್ಕ ವ್ಯವಸ್ಥೆಯ ಪರಿಶೀಲನೆಯ ಮೇಲೆ ಗಮನ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.