ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಮಾಪನಶಾಸ್ತ್ರ ಸಮಾವೇಶದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಭಾಷಣ ಮಾಡಿದರು. ಇದೇ ವೇಳೆ ಅವರು ರಾಷ್ಟ್ರೀಯ ಅಟಾಮಿಕ್ ಟೈಮ್ ಸ್ಕೇಲ್ ಮತ್ತು ಭಾರತೀಯ ನಿರ್ದೇಶಕ್ ದ್ರಾವ್ಯ ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು ಮತ್ತು ರಾಷ್ಟ್ರೀಯ ಪರಿಸರ ಮಾನದಂಡ ಪ್ರಯೋಗಾಲಯದ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಾ.ಹರ್ಷವರ್ಧನ್ ಅವರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಮೋದಿ,”ಇಂದು, ಭಾರತದಲ್ಲಿ ಉದ್ಯಮ ಮತ್ತು ಸಂಸ್ಥೆಯ ನಡುವಿನ ಸಹಯೋಗವನ್ನು ಬಲಪಡಿಸಲಾಗುತ್ತಿದೆ. ವಿಶ್ವದ ಪ್ರಮುಖ ಕಂಪನಿಗಳು ತಮ್ಮ ಸಂಶೋಧನಾ ಕೇಂದ್ರಗಳು ಮತ್ತು ಸೌಲಭ್ಯಗಳನ್ನು ಭಾರತದಲ್ಲಿ ಸ್ಥಾಪಿಸುತ್ತಿವೆ. ಈ ಸೌಲಭ್ಯಗಳ ಸಂಖ್ಯೆಯೂ ವರ್ಷಗಳಲ್ಲಿ ಹೆಚ್ಚಾಗಿದೆ” ಎಂದರು.
“ನಮ್ಮಲ್ಲಿರುವ ಪೇಟೆಂಟ್ಗಳ ಸಂಖ್ಯೆ ಹೆಚ್ಚಾದಷ್ಟು ನಮಗೆ ಉಪಯುಕ್ತತೆ ಎಂಬುದನ್ನು ನಾವು ನೆನಪಿನಲ್ಲಿಡಬೇಕು. ನಮ್ಮ ಸಂಶೋಧನೆಯು ಹೆಚ್ಚು ಕ್ಷೇತ್ರಗಳನ್ನು ಮುನ್ನಡೆಸುತ್ತದೆ, ನಿಮ್ಮ ಗುರುತು ಬಲವಾಗಿರುತ್ತದೆ. ಬ್ರಾಂಡ್ ಇಂಡಿಯಾ ಕೂಡ ಅಷ್ಟೇ ಪ್ರಬಲವಾಗಿರುತ್ತದೆ” ಎಂದಿದ್ದಾರೆ.
ರಾಷ್ಟ್ರೀಯ ಪರಮಾಣು ಕಾಲ ಮಾಪಕದಿಂದ 2.8 ನ್ಯಾನೋ ಸೆಕೆಂಡ್ ಖಚಿತತೆಯೊಂದಿಗೆ ಭಾರತೀಯ ಕಾಲಮಾನ ಸೃಷ್ಟಿಯಾಗಲಿದೆ. ಭಾರತೀಯ ನಿರ್ದೇಶಕ್ ದ್ರಾವ್ಯ, ಇದು ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿ ಗುಣಮಟ್ಟ ಖಾತ್ರಿಗೆ ಪ್ರಯೋಗಾಲಯಗಳಲ್ಲಿ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಕೈಗೊಳ್ಳಲು ನೆರವಾಗಲಿದೆ. ರಾಷ್ಟ್ರೀಯ ಪರಿಸರ ಮಾನದಂಡ ಪ್ರಯೋಗಾಲಯ, ಸೂಕ್ತ ವಾಯು ಮತ್ತು ಕೈಗಾರಿಕಾ ಮಾಲಿನ್ಯ ನಿಗಾ ಸಾಧನಕ್ಕೆ ಪ್ರಮಾಣೀಕರಣದಲ್ಲಿ ಸ್ವಾವಲಂಬನೆ ಸಾಧಿಸಲು ನೆರವಾಗಲಿದೆ.
ನವದೆಹಲಿಯ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ-ರಾಷ್ಟ್ರೀಯ ಭೌತಿಕ ಪ್ರಯೋಗಾಲಯ( ಸಿಎಸ್ ಐಆರ್-ಎನ್ ಪಿಎಲ್ ) ತನ್ನ ಸ್ಥಾಪನೆಯ 75ನೇ ವರ್ಷದ ಅಂಗವಾಗಿ ರಾಷ್ಟ್ರೀಯ ಮಾಪನಶಾಸ್ತ್ರ ಶೃಂಗಸಭೆ 2021 ಅನ್ನು ಆಯೋಜಿಸಿದೆ. ಈ ಸಮಾವೇಶದ ಘೋಷವಾಕ್ಯ “ರಾಷ್ಟ್ರದ ಸಮಗ್ರ ಬೆಳವಣಿಗೆಗೆ ಮಾಪನಶಾಸ್ತ್ರ’’ ಎಂಬುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.