News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನ: ರಾಮನಗರದಲ್ಲಿ ಕಾರ್ಯಾಲಯ ಉದ್ಘಾಟನೆ

ರಾಮನಗರ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನವು ಜಿಲ್ಲೆಯಲ್ಲಿ ಜ. 15 ರಿಂದ ಫೆ.5 ರ ವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ಷೇತ್ರ ಕಾರ್ಯವಾಹ ನಾ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಅವರು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಜಿಲ್ಲಾ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಕೈಲಾದ ಮಟ್ಟಿನ ಮೊತ್ತ ಸಮರ್ಪಣೆ ಮಾಡುವ ಅವಕಾಶವನ್ನು ಎಲ್ಲಾ ಭಾರತೀಯರಿಗೂ ಒದಗಿಸಲಾಗಿದೆ. ಈ ಅಭಿಯಾನ ದೇಶದ ಪ್ರತಿಯೊಂದು ಗ್ರಾಮದಲ್ಲಿಯೂ ನಡೆಯಲಿದೆ. ರಾಮ ಮಂದಿರ ನಿರ್ಮಾಣದ ಮೂಲಕ ಸ್ವಾವಲಂಬಿ, ಸಶಕ್ತ ರಾಷ್ಟ್ರ ನಿರ್ಮಾಣದ ಪರಿಕಲ್ಪನೆಗೆ ಮತ್ತಷ್ಟು ಪುಷ್ಠಿ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿಯೇ ಕಾರ್ಯಾಲಯವನ್ನು ಆರಂಭ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಕನಕಪುರದ ಮರಳೇಗವಿ ಮಠದ ಶ್ರೀ ಡಾ. ಶಿವರುದ್ರ ಸ್ವಾಮೀಜಿ ಅವರು ಮಾತನಾಡಿ, ಎಷ್ಟು ಹಣ ನೀಡುತ್ತೇವೆ ಎಂಬುದು ಮುಖ್ಯವಲ್ಲ. ಬದಲಾಗಿ ನಾವು ಎಷ್ಟು ಸಮರ್ಪಣಾ ಭಾವದಿಂದ ಅದನ್ನು ಸಮರ್ಪಿಸುತ್ತೇವೆ ಎಂಬುದು ಮುಖ್ಯವಾಗುತ್ತದೆ. ದೇಶದ ಜನರ ಸಂಕಲ್ಪ ಶಕ್ತಿಯಿಂದಲೇ ಮಂದಿರ ನಿರ್ಮಾಣವಾಗುತ್ತಿದ್ದು, ರಾಮನ ಸೇವೆಯಲ್ಲಿ ಕೃತಾರ್ಥರಾಗಲು ಇದೊಂದು ಉತ್ತಮ ಅವಕಾಶ ಎಂದು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top