ಮೈಸೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯಶಾಲಿಗಳಾದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸನ್ಮಾನಿಸುವ ಮತ್ತು ಮುಂದಿನ ತಾಲೂಕು ಪಂಚಾಯತ್ ಚುನಾವಣೆ, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ರಣತಂತ್ರ ಹೆಣೆದಿರುವ ಬಿಜೆಪಿ ಪಕ್ಷ ಇಂದಿನಿಂದ ತೊಡಗಿದಂತೆ ಜ. 13 ರ ವರೆಗೆ ರಾಜ್ಯದಲ್ಲಿ ಹಮ್ಮಿಕೊಂಡಿರುವ ಜನಸೇವಕ ಸಮಾವೇಶಕ್ಕೆ ಮೈಸೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು.
ಇಂದಿನಿಂದ 3 ದಿನಗಳ ಕಾಲ ರಾಜ್ಯಾದಂತ 5 ತಂಡಗಳು ಜನಸೇವಕ ಸಮಾವೇಶದ ಮೂಲಕ ಬಿಜೆಪಿ ಸರ್ಕಾರದ ಈ ವರೆಗಿನ ಸಾಧನೆಯನ್ನು ರಾಜ್ಯದ ಜನರ ಮನೆ ಮನಗಳಿಗೆ ತಲುಪಿಸುವ ಕೆಲಸವನ್ನು ಮಾಡಲಿವೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ?. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳನ್ನು ದೂಷಿಸುವುದರ ಹೊರತಾಗಿ ಕಾಂಗ್ರೆಸಿಗರು ಬೇರೆ ಏನನ್ನೂ ಮಾಡುತ್ತಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ಇದೆಯೇ ಎಂಬ ಸಂದೇಹ ಬರುತ್ತಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಏನು ಹೇಳಿಕೆ ಕೊಡುತ್ತಾರೆ, ಅವುಗಳನ್ನು ಹೇಗೆ ತಿರುಚಬಹುದು, ಹೇಗೆ ಬಿಜೆಪಿಯ ಹೇಳಿಕೆಗಳಿಗೆ ಬೇರೆ ಅರ್ಥವನ್ನು ಕಲ್ಪಿಸಬಹುದು ಎಂಬುದರತ್ತಲೇ ಕಾಂಗ್ರೆಸ್ಸಿಗರ ಚಿತ್ತ ನೆಟ್ಟಿರುತ್ತದೆ ಎಂದು ಬಿಎಸ್ವೈಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೂರು ಶಾಪಗಳ ಕಾರಣದಿಂದ ಕಾಂಗ್ರೆಸ್ ಪಕ್ಷ ಧೂಳೀಪಟವಾಗಲಿದೆ. ಅಂಬೇಡ್ಕರ್ ಶಾಪ, ಗಾಂಧೀಜಿ ಅವರ ಶಾಪ ಮತ್ತು ಗೋವುಗಳ ಶಾಪದ ಜೊತೆಗೆ, ಅಧಿಕಾರದಲ್ಲಿದ್ದಾಗ ಕಾಂಗ್ರಸ್ ತೋರಿದ ದರ್ಪ, ಅಹಂಕಾರಗಳೆಲ್ಲವೂ ಈ ಬಾರಿ ಕಾಂಗ್ರೆಸ್ ಪಕ್ಷವನ್ನೇ ಅವಸಾನದತ್ತ ದೂಡಲಿದೆ. ಗಾಂಧೀಜಿ ಅವರ ಹೆಸರಿನಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಆ ಬಳಿಕ ಗಾಂಧೀಜಿಯವರ ತತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಮಾಡಿತು. ಅದಾದ ಬಳಿಕ ಮತ ಪಡೆಯುವ ಏಕೈಕ ಗುರಿಯನ್ನಿಟ್ಟುಕೊಂಡು ಅಂಬೇಡ್ಕರ್ ಅವರ ಚಿತ್ರಗಳನ್ನು ಬಳಕೆ ಮಾಡಿತು. ಆದರೆ ಅಂಬೇಡ್ಕರ್ ಅವರ ತತ್ವಗಳಿಗೆ ಕಾಂಗ್ರೆಸ್ಸಿಗರೇ ಬೆಲೆ ನೀಡುತ್ತಿರಲಿಲ್ಲ. ಇನ್ನು ಗೋಹತ್ಯೆಗೆ ಸಂಬಂಧಿಸಿದಂತೆಯೂ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಶಾಪಕ್ಕೆ ತುತ್ತಾಗಿದೆ ಎಂದು ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.