ಬೆಂಗಳೂರು: ದೇಶದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಪ್ರದಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ ಸುಧಾಕರ್ ಅವರು ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ರಾಜ್ಯದಲ್ಲಿ ಮೊದಲ ಲಸಿಕೆಯನ್ನು ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ನೀಡಲು ಆರಂಭಿಸಲಾಗಿದ್ದು, ಆಸ್ಪತ್ರೆಯ ಡಿ ಗ್ರೂಪ್ ನೌಕರರಾಗಿರುವ ಚಂದ್ರಶೇಖರ್ ಅವರು ಪಡೆದುಕೊಂಡಿದ್ದಾರೆ.
ಭಾರತದಲ್ಲೇ ತಯಾರಾದ ಈ ಲಸಿಕೆಗಳನ್ನು ಎರಡು ಹಂತದಲ್ಲಿ ನೀಡಲಾಗುತ್ತಿದ್ದು, ಮೊದಲ ಡೋಸ್ ತೆಗೆದುಕೊಂಡ 28 ದಿನಗಳ ಬಳಿಕ ಇನ್ನೊಂದು ಹಂತದ ಲಸಿಕೆಯನ್ನು ನೀಡಲಾಗುತ್ತದೆ. ಅದಾದ ಎರಡು ವಾರಗಳಲ್ಲಿ ಕೊರೋನಾ ವ್ಯಾಕ್ಸಿನ್ ಪಡೆದುಕೊಂಡ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಆರಂಭವಾಗಲಿದೆ. ಈ ಲಸಿಕೆಗಳು ಕೊರೋನಾ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಲಿವೆ. ಯಾರಿಗೆ ಹೆಚ್ಚು ಅಗತ್ಯವಿದೆಯೋ ಅವರಿಗೆ ಆದ್ಯತೆಯಲ್ಲಿ ಈ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ.
ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇಂದು ಮುಖ್ಯಮಂತ್ರಿ @BSYBJP ರವರು ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು. ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ರಾಜ್ಯಾದ್ಯಂತ ಲಸಿಕೆ ವಿತರಣೆ ಅಧಿಕೃತವಾಗಿ ಚಾಲನೆ ನೀಡಲಾಯಿತು. (1/2)#LargestVaccinationDrive pic.twitter.com/JJMiuou9c2
— CM of Karnataka (@CMofKarnataka) January 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.