ಬೆಂಗಳೂರು: ನಗರದಲ್ಲಿ ಪ್ರತಿ ವರ್ಷ ಮಾಡಲಾಗುತ್ತಿದ್ದ ಫಲ ಪುಷ್ಪ ಪ್ರದರ್ಶನದ ಮೇಲೆ ಈ ಬಾರಿ ಕೊರೋನಾ ರೂಪಾಂತರದ ಕರಿಛಾಯೆ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರದರ್ಶನ ರದ್ದಾಗಿದೆ.
ಪ್ರತಿ ವರ್ಷವೂ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಗರದ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಲಕ್ಷಾಂತರ ಜನರು ಈ ಮೇಳದಲ್ಲಿ ಭಾಗವಹಿಸುತ್ತಿದ್ದರು. ಆದರೆ ಈ ಬಾರಿ ವಿಶ್ವವನ್ನೇ ನಲುಗಿಸಿರುವ ಕೊರೋನಾ, ಕೊರೋನಾ ರೂಪಾಂತರ ಸೋಂಕು ಹರಡುವ ಹಿನ್ನೆಲೆಯಲ್ಲಿ ಈ ಪ್ರದರ್ಶನವನ್ನು ರದ್ದು ಮಾಡಲಾಗಿದೆ.
ಈ ಸಂಬಂಧ ತೋಟಗಾರಿಕಾ ಇಲಾಖೆ ಸಚಿವ ಕೆ. ನಾರಾಯಣ ಗೌಡ ಅವರು ಮಾಹಿತಿ ನೀಡಿದ್ದು, ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಈ ವರ್ಷ ನಡೆಯಬೇಕಿದ್ದ ಫಲ ಪುಷ್ಪ ಆಯೋಜನೆಯನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಆಗಸ್ಟ್ ಸಂದರ್ಭದಲ್ಲಿ ಕೊರೋನಾ ಹಾವಳಿ ಸಂಪೂರ್ಣ ಕಡಿಮೆಯಾಗಿದ್ದರೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಈ ಪ್ರದರ್ಶನವನ್ನು ಆಯೋಜನೆ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಇದಕ್ಕಾಗಿ ಸೂಕ್ತ ಥೀಮ್ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.