ಬೆಂಗಳೂರು: 15 ನೇ ಹಣಕಾಸು ಆಯೋಗದ ವರದಿಯಲ್ಲಿ 2020-21ರ ಸಾಲಿನಲ್ಲಿ ರಾಜ್ಯಕ್ಕೆ 5,495 ಕೋಟಿ ರೂ. ನೀಡಲು ಶಿಫಾರಸ್ಸು ಮಾಡಿದ್ದು, 2021-22 ರ ಸಾಲಿನ ಕೇಂದ್ರ ಸರ್ಕಾರದ ಬಜೆಟ್ನಲ್ಲಿ ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗಿನ ಎಲ್ಲಾ ರಾಜ್ಯಗಳ ಬಜೆಟ್ ಪೂರ್ವಭಾವಿ ವಿಡಿಯೋ ಸಂವಾದದಲ್ಲಿ ಕೇಂದ್ರ ಸಚಿವ ಬಸವರಾಜ್ ಬೊಮ್ಮಾಯಿ ಅವರು ಈ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಇಡೀ ದೇಶದಲ್ಲೇ ಹೆಚ್ಚು ಅನುದಾನವನ್ನು ಸಂಗ್ರಹಿಸುವ ರಾಜ್ಯ ಕರ್ನಾಟಕವಾಗಿದೆ. ಈ ಅಂಶವನ್ನು ಗಮನಿಸಿ ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ರಾಜ್ಯಗಳಿಗೆ ಹಣಕಾಸು ಹಂಚಿಕೆಗೆ ಸಂಬಂಧಿಸಿದಂತೆ 15 ನೇ ಹಣಕಾಸು ಆಯೋಗ ನಿಡಿರುವ ವರದಿಗೆ ಅನುಗುಣವಾಗಿ ಕೇಂದ್ರ ಸರ್ಕಾರ ಬಜೆಟ್ ಮಂಡಿಸಲು ಒಪ್ಪಿದರೆ, ರಾಜ್ಯಗಳಿಗೂ ಅದಕ್ಕನುಗುಣವಾಗಿ ರಾಜ್ಯ ಬಜೆಟ್ ಸಿದ್ಧಪಡಿಸಲು ಅನುಕೂಲವಾಗುತ್ತದೆ ಎಂದು ಅವರು ವಿತ್ತ ಸಚಿವರಿಗೆ ತಿಳಿಸಿದ್ದಾರೆ. ಇದರಿಂದ ರಾಜ್ಯದ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೂ ಸಹಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ನೆರೆ, ಪ್ರವಾಹ ಪರಿಸ್ಥಿತಿ, ಕೊರೋನಾ ಸಂಕಷ್ಟ ಮೊದಲಾದ ಹಲವು ಕಾರಣಗಳಿಂದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿದೆ. ಜೊತೆಗೆ ತ್ಯಾಜ್ಯ ವಿಲೇವಾರಿ, ಬರ ಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿಕಾರ್ಯಗಳು ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ವಿಶೇಷ ಅನುದಾನ ಒದಗಿಸುವಂತೆ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.