ನವದೆಹಲಿ: ಬ್ರಿಸ್ಬೇನ್ ನಲ್ಲಿ ನಡೆದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 3 ವಿಕೆಟ್ ಗಳಿಂದ ರೋಚಕ ಜಯಗಳಿಸಿದೆ. ಈ ಗೆಲುವಿನೊಂದಿಗೆ ಭಾರತ ನಾಲ್ಕು ಪಂದ್ಯಗಳ ಸರಣಿಯ ಬಾರ್ಡರ್ – ಗವಾಸ್ಕರ್ ಟ್ರೋಫಿಯನ್ನು 2-1ರ ಅಂತರದಿಂದ ತನ್ನದಾಗಿಸಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿಯವರು ಈ ಮಹತ್ವದ ಗೆಲುವಿಗಾಗಿ ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಆಸ್ಟ್ರೇಲಿಯಾದಲ್ಲಿ ನಡೆದ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಸಿಕ್ಕ ಯಶಸ್ಸಿನಿಂದ ನಾವೆಲ್ಲರೂ ಖುಷಿಪಟ್ಟಿದ್ದೇವೆ. ಪಂದ್ಯದುದ್ದಕ್ಕೂ ಅವರ ಗಮನಾರ್ಹ ಸ್ಪೂರ್ತಿ ಮತ್ತು ಉತ್ಸಾಹವು ಗೋಚರಿಸಿತ್ತು. ಅವರ ಅಚಲ ಉದ್ದೇಶ, ಗಮನಾರ್ಹವಾದ ಗುರಿ ಮತ್ತು ದೃಢ ನಿಶ್ಚಯ ಕೂಡ ಹಾಗೆಯೇ ಇತ್ತು. ತಂಡಕ್ಕೆ ಅಭಿನಂದನೆಗಳು! ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದಿದ್ದಾರೆ.
ಟ್ವಿಟ್ಟರ್ನಲ್ಲಿ ಭಾರತದ ಗೆಲುವಿಗೆ ವರ್ಚುವಲ್ ಸಂಭ್ರಮಾಚರಣೆ ಪ್ರಾರಂಭವಾಗಿದೆ, ಹೆಚ್ಚಿನ ಸಂಖ್ಯೆಯ ರಾಜಕೀಯ ನಾಯಕರು ಅಭಿನಂದನಾ ಸಂದೇಶಗಳನ್ನು ಹರಿಬಿಟ್ಟಿದ್ದಾರೆ. “ಐತಿಹಾಸಿಕ ಸರಣಿ ಗೆಲುವು ದಾಖಲಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಹ್ಯಾಟ್ಸ್ಆಫ್. ನಿಮ್ಮ ಗಮನಾರ್ಹ ಸಾಧನೆಯ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆಪಡುತ್ತದೆ. ಉತ್ತಮವಾಗಿ ಆಡಿದೆ ಟೀಮ್ ಇಂಡಿಯಾ!” ಎಂದು ಗೃಹ ಸಚಿವ ಅಮಿತ್ ಶಾ ಟ್ವಿಟ್ ಮಾಡಿದ್ದಾರೆ.
We are all overjoyed at the success of the Indian Cricket Team in Australia. Their remarkable energy and passion was visible throughout. So was their stellar intent, remarkable grit and determination. Congratulations to the team! Best wishes for your future endeavours.
— Narendra Modi (@narendramodi) January 19, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.