ಬೆಂಗಳೂರು: ಸಚಿವ ಸಂಪುಟಕ್ಕೆ ಕಳೆದ ವಾರವಷ್ಟೇ ನೂತನವಾಗಿ ಸೇರಿಸಿಕೊಂಡಿದ್ದ ಸಚಿವರಿಗೆ ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಖಾತೆ ಹಂಚಿಕೆ ಮಾಡಿದ್ದರು. ಇದೀಗ ನಾಲ್ವರು ಸಚಿವರ ಖಾತೆಗಳನ್ನು ಬದಲಾವಣೆ ಮಾಡಿ ಮರು ಹಂಚಿಕೆ ಮಾಡಿದ್ದಾರೆ.
ಸಚಿವ ಎಂ ಟಿ ಬಿ ನಾಗರಾಜ್ ಅವರಿಗೆ ಪೌರಾಡಳಿತ ಮತ್ತು ಸಕ್ಕರೆ, ಕೆ ಗೋಪಾಲಯ್ಯ ಅವರಿಗೆ ಅಬಕಾರಿ ಇಲಾಖೆ, ಆರ್ ಶಂಕರ್ ಅವರಿಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಡಾ ಕೆ ಸಿ ನಾರಾಯಣ ಗೌಡ ಅವರಿಗೆ ಯುವಜನ ಸೇವೆ, ಹಜ್ ಮತ್ತು ವಕ್ಫ್ ಇಲಾಖೆಗಳ ಜೊತೆಗೆ ಹೆಚ್ಚುವರಿಯಾಗಿ ಯೋಜನೆ ಸಾಂಖ್ಯಿಕ ಅಂಕಿ ಅಂಶಗಳ ಜವಾಬ್ದಾರಿಯನ್ನು ನೀಡಲಾಗಿದೆ.
ನಿನ್ನೆಯಷ್ಟೇ ನೂತನವಾದ ಸಚಿವರಿಗೆ ಖಾತೆ ಹಂಚಿಕೆ ಮತ್ತು ಹಳೆಯ ಸಚಿವರ ಖಾತೆಗಳಲ್ಲಿ ಬದಲಾವಣೆಯನ್ನು ಮುಖ್ಯಮಂತ್ರಿಗಳು ಮಾಡಿದ್ದರು. ಇದರ ನಡುವೆಯೇ ಖಾತೆ ಹಂಚಿಕೆಯ ಬಗ್ಗೆ ಕೆಲ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ನಾಲ್ಕು ಮಂದಿ ಸಚಿವರ ಖಾತೆಯನ್ನು ಮುಖ್ಯಮಂತ್ರಿಗಳು ಬದಲಾವಣೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.