ಶಿವಮೊಗ್ಗ: ಜಿಲ್ಲೆಯ ಪೊಲೀಸ್ ಇಲಾಖೆಯಿಂದ ತುರ್ತು ಸ್ಪಂದನೆಗೆ ಸಂಬಂಧಿಸಿದಂತೆ ಡಯಲ್-112 ಸೇವೆಗೆ ಇಂದು ಚಾಲನೆ ನೀಡಲಾಯಿತು. ಧಾರವಾಡದ ಪೂರ್ವ ವಲಯದ ಐಜಿಪಿ ರವಿ ಅವರು ಈ ಸೇವೆಗೆ ಚಾಲನೆಯನ್ನು ನೀಡಿದರು.
ಬಳಿಕ ಮಾತನಾಡಿದ ಅವರು, ಡಯಲ್-112 ಸೇವೆಯು ಪ್ರವೀಣ್ ಸೂದ್ ಅವರ ಕನಸಿನ, ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಸೇವೆಯು ಮೊಬೈಲ್ ಪೊಲೀಸ್ ಔಟ್ಪೋಸ್ಟ್ ಸೇವೆಯ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.
ಜನಸಾಮಾನ್ಯರು ಯಾವುದೇ ಸಂದರ್ಭದಲ್ಲಿ 112 ಕ್ಕೆ ಕರೆ ಮಾಡಿದರೆ ತಕ್ಷಣವೇ ಅಲ್ಲಿನ ಸಿಬ್ಬಂದಿ ಸಮೀಪದ ಇಆರ್ಎಸ್ಎಸ್ಗೆ ಕರೆ ಬಂದ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡುತ್ತಾರೆ. ಆ ಬಳಿಕ ಸ್ಥಳಕ್ಕೆ ಪೊಲೀಸ್ ವಾಹನ ತೆರಳುತ್ತದೆ. ಅಗ್ನಿಶಾಮಕ ಸೇವೆ ಹೊರತು ಪಡಿಸಿದಂತೆ ಉಳಿದ ಸೇವೆಗಳನ್ನು ಇದಕ್ಕೆ ಜೋಡಿಸಲಾಗಿದೆ. ಇಬ್ಬರು ಸಿಬ್ಬಂದಿಗಳು ಇದರಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಜಿಲ್ಲೆಗೆ 18 ಡಯಲ್-112 ವಾಹನಗಳನ್ನು ಒದಗಿಸಲಾಗಿದೆ. ತುರ್ತು ಸಂದರ್ಭದಲ್ಲಿ ಜನರು ಇದನ್ನು ಬಳಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.