ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಿನ್ನೆ ರೈತರ ಹೆಸರಿನಲ್ಲಿ ನಡೆದ ಹಿಂಸಾಚಾರವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆದರೂ ಕೆಲವು ಬುದ್ಧಿಜೀವಿಗಳು ಎಂದು ಕರೆಸಿಕೊಳ್ಳುವವರು ಪ್ರತಿಭಟನಾಕಾರರು ನಡೆಸಿದ ಹಿಂಸೆಯನ್ನು ಸಮರ್ಥಿಸಿಕೊಳ್ಳುವ ಮಟ್ಟಕ್ಕೆ ಸುಳ್ಳುಗಳನ್ನು ಹಬ್ಬಿಸಲು ಪ್ರಯತ್ನಿಸಿದ್ದಾರೆ. ಇಂತಹವರಲ್ಲಿ ಒಬ್ಬ ಖ್ಯಾತ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ.
ಟ್ರ್ಯಾಕ್ಟರ್ನಲ್ಲಿ ಸ್ಟಂಟ್ ಮಾಡಲು ಹೋಗಿ ಒಬ್ಬ ಪ್ರತಿಭಟನಾಕಾರ ಮೃತಪಟ್ಟಿರುವ ಘಟನೆ ನಿನ್ನೆ ಹಿಂಸಾಚಾರದ ನಡುವೆ ನಡೆದಿತ್ತು. ಆದರೆ ರಾಜ್ದೀಪ್ ಸರ್ದೇಸಾಯಿ ಈ ಘಟನೆಯನ್ನು ಪೊಲೀಸರ ಮೇಲೆ ಎತ್ತಿ ಹಾಕಲು ಪ್ರಯತ್ನಿಸಿದ್ದಾರೆ. ಟ್ವೀಟ್ ಮಾಡಿದ್ದ ಸರ್ದೇಸಾಯಿ, “45 ವರ್ಷದ ನವನೀತ್ ಎಂಬುವವರು ಪೋಲೀಸ್ ಫೈರಿಂಗ್ನಿಂದ ಐಟಿಒ ಪ್ರದೇಶದಲ್ಲಿ ಸಾವಿಗೀಡಾಗಿದ್ದಾರೆ. ಈ ಸಾವನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂದು ರೈತರು ನನ್ನ ಬಳಿ ಹೇಳಿಕೊಂಡಿದ್ದಾರೆ” ಎಂದಿದ್ದರು.
ಅವರ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಬಳಿಕ ಎಲ್ಲರೂ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಸರ್ದೇಸಾಯಿ ತಮ್ಮ ಟ್ವೀಟ್ ಅನ್ನು ಅಳಿಸಿದ್ದಾರೆ. ಬಳಿಕ ತಮ್ಮ ವರದಿಯನ್ನು ಟ್ರ್ಯಾಕ್ಟರ್ ಸ್ಟಂಟ್ನಿಂದ ಒಬ್ಬ ಸತ್ತಿದ್ದಾನೆಂದು ಎಂದು ಮಾಡಿದ್ದಾರೆ.
ರೈತ ಟ್ರಾಕ್ಟರ್ ಪಲ್ಟಿಯಾಗಿ ಸತ್ತಿರುವ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಹಿಂಗಾಗಿ ಸರ್ದೇಸಾಯಿ ಅಂತಹ ನಕಲಿ ಸುದ್ದಿ ಹರಡುವವರು ಜನರ ಕಣ್ಣಿಗೆ ಮಣ್ಣೆರಚಲು ಸಾಧ್ಯವಾಗಲಿಲ್ಲ. ಅಲ್ಲದೇ ಸಾಮಾಜಿಕ ಜಾಲ ತಾಣಗಳಲ್ಲಿ ನೈಜ ದೃಶ್ಯಾವಳಿಗಳು ಹರಿದಾಡುತ್ತಿದ್ದ ಕಾರಣ ಎಡಪಂಥೀಯ ಪತ್ರಕರ್ತರಿಗೆ ಜನರ ದಾರಿ ತಪ್ಪಿಸಿ ಪ್ರತಿಭಟನಾಕಾರರನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗಿಲ್ಲ.
And @sardesairajdeep deleted his tweet. Just imagine the kind of fake propaganda they must have spread during 2002 when News Channels were only source of information. pic.twitter.com/kPtmA2oi4w
— Facts (@BefittingFacts) January 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.