ನವದೆಹಲಿ: ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ರೈತರ ಟ್ರ್ಯಾಕ್ಟರ್ ಮೆರವಣಿಗೆ ಹಿಂಸಾತ್ಮಕ ತಿರುವು ಪಡೆದುಕೊಂಡಿತ್ತು, ಪ್ರತಿಭಟನಾಕಾರರ ಒಂದು ಗುಂಪು ಪೊಲೀಸ್ ಬ್ಯಾರಿಕೇಡ್ಗಳನ್ನು ಮುರಿದು ನಗರದ ಕೆಲವು ಭಾಗಗಳನ್ನು ಪ್ರವೇಶಿಸಿತ್ತು.
ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಿಂದ ಹಲವು ಪ್ರದೇಶಗಳಲ್ಲಿ ಹಲವಾರು ಜನರು ಗಾಯಗೊಂಡರು ಮತ್ತು ವಾಹನಗಳು ಪಲ್ಟಿಯಾದವು. ಪೊಲೀಸರು ಗಾಯಗೊಂಡರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಅಶ್ರುವಾಯು ಪ್ರಯೋಗಿಸಿದ್ದರು. ಒಟ್ಟಿನಲ್ಲಿ ರೈತ ಪ್ರತಿಭಟನೆಯ ಇಡೀ ಹೋರಾಟವೇ ಹಿಂಸೆಗೆ ತಿರುಗಿ ಜನರ ಕೆಂಗಣ್ಣಿಗೆ ಗುರಿಯಾಯಿತು.
ಈ ಘಟನೆಯ ನಂತರ ಎರಡು ರೈತ ಸಂಘಟನೆಗಳು ಹೋರಾಟದಿಂದ ಹೊರ ಬಂದಿವೆ. ಜನರನ್ನು ಹುತಾತ್ಮರನ್ನಾಗಿಸಲು ನಾವು ಈ ಹೋರಾಟಕ್ಕೆ ಬಂದಿಲ್ಲ ಎಂದು ಆರ್ಕೆಎಂಎಸ್ ಸಂಘಟನೆ ಮುಖಂಡರು ಹೇಳಿದ್ದಾರೆ. ಕಾನೂನು ವಿರುದ್ಧ ಹೋರಾಡುತ್ತೇವೆ. ಆದರೆ ದೆಹಲಿ ಪ್ರತಿಭಟನಾಕಾರರೊಂದಿಗೆ ಸೇರುವುದಿಲ್ಲ ಎಂದಿದೆ.
“ದಾರಿ ವಿಭಿನ್ನವಾಗಿರುವ ಯಾರೊಂದಿಗಾದರೂ ನಾನು ಪ್ರತಿಭಟನೆಯನ್ನು ಮುಂದುವರಿಸಲು ಸಾಧ್ಯವಿಲ್ಲ. ನಾನು ಅವರಿಗೆ ಶುಭ ಹಾರೈಸುತ್ತೇನೆ ಆದರೆ ವಿಎಂ ಸಿಂಗ್ ಮತ್ತು ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿದೆ” ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನ್ ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಮುಖಂಡ ವಿಎಂ ಸಿಂಗ್ ಹೇಳಿದ್ದಾರೆ.
Correction: I can’t carry forward protest with someone whose direction is different. I wish them best but VM Singh & Rashtriya Kisan Mazdoor Sangathan* are withdrawing from the protest: VM Singh, Rashtriya Kisan Mazdoor Sangathan & All India Kisan Sangharsh Coordination Committee pic.twitter.com/kXC70UvRWZ
— ANI (@ANI) January 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.