ತಿರುವನಂತಪುರ : 2021 ಫೆ. 20 ರಿಂದ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ವಿಜಯ ಯಾತ್ರೆ ಆರಂಭ. ಯಾತ್ರೆಯು ಕೇರಳ ರಾಜ್ಯದ 140 ವಿಧಾನಸಭಾ ಕ್ಷೇತ್ರಗಳ ಮೂಲಕ ಹಲವು ಬಹಿರಂಗ ಸಭೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಾಗಲಿದೆ. ಕಳೆದ ಬಾರಿ ನಡೆದ ರಾಜ್ಯ ಚುನಾವಣೆಯಲ್ಲಿ ತಿರುವನಂತಪುರದ ನೇಮಂ ಕ್ಷೇತ್ರದಲ್ಲಿ ಬಿಜೆಪಿ ತನ್ನ ಪ್ರಪ್ರಥಮ ಖಾತೆಯನ್ನು ತೆರೆದಿತ್ತು. ಹಿರಿಯ ಬಿಜೆಪಿ ನಾಯಕ ಒ. ರಾಜಗೋಪಾಲ ಶಾಸಕರಾಗಿ ಆಯ್ಕೆಯಾಗಿದ್ದರು.
ಈ ಬಾರಿ ಚುನಾವಣೆಯು ಎಪ್ರಿಲ್ ತಿಂಗಳಲ್ಲಿ ನಡೆಯಲಿದೆ. ಕೇಂದ್ರ ನಾಯಕರು ಸಚಿವರು ವಿಜಯಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ, ಪಾಲಕ್ಕಾಡ್, ಪತ್ತನಂತಿಟ್ಟ ಸಹಿತ ಹಲವು ಕ್ಷೇತ್ರಗಳಲ್ಲಿ ಖಾತೆ ತೆರೆಯುವ ವಿಶ್ವಾಸವನ್ನು ಪಕ್ಷ ಹೊಂದಿದೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ನಡೆಸುತ್ತಿರುವ ಆಡಳಿತಾರೂಢ ಎಡರಂಗ, ಕಾಂಗ್ರೆಸ್ಸಿನ ಬಲರಂಗವನ್ನು ಆಡಳಿತದಿಂದ ಹೊರಗಿಡುವ ಪ್ರಯತ್ನ ನಮ್ಮದಾಗಿದೆ ಎಂದು ಕೆ. ಸುರೇಂದ್ರನ್ ಹೇಳಿದ್ದಾರೆ.
ಮಂಜೇಶ್ವರದಲ್ಲಿ ಆರಂಭವಾಗುವ ವಿಜಯಯಾತ್ರೆಯನ್ನು ಬಿಜೆಪಿ ಕೇಂದ್ರೀಯ ನಾಯಕರು ಉದ್ಘಾಟಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.