ನವದೆಹಲಿ: ಹಿಂದೂ ಮಹಾಸಾಗರ ಪ್ರದೇಶದ ದೇಶಗಳಿಗೆ ಕ್ಷಿಪಣಿಗಳು ಮತ್ತು ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳು ಸೇರಿದಂತೆ ವಿವಿಧ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಪೂರೈಸಲು ಭಾರತ ಸಿದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.
“ಏರೋ ಇಂಡಿಯಾ -2021” ಎಂಬ ಅಂತರರಾಷ್ಟ್ರೀಯ ಕಾರ್ಯಕ್ರಮದ ಸಂದರ್ಭ ಹಿಂದೂ ಮಹಾಸಾಗರ ಪ್ರದೇಶದ ದೇಶಗಳ ಸಮಾವೇಶವನ್ನು ಆಯೋಜಿಸಿರುವುದು, ಭಾರತವು ಸಾಮಾನ್ಯ ಬೆಳವಣಿಗೆ ಮತ್ತು ಸ್ಥಿರತೆ ಮತ್ತು ಅವರೊಂದಿಗೆ ರಚನಾತ್ಮಕ ತೊಡಗಿಸಿಕೊಳ್ಳುವಿಕೆಯ ದೃಷ್ಟಿಗೆ ನೀಡುವ ಮಹತ್ವವನ್ನು ತೋರಿಸುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಹಿಂದೂ ಮಹಾಸಾಗರ ಪ್ರದೇಶದ ದೇಶಗಳ ರಕ್ಷಣಾ ಮಂತ್ರಿಗಳ ಸಮಾವೇಶದಲ್ಲಿ ಮುಖ್ಯ ಭಾಷಣ ಮಾಡಿದ ಅವರು, “ವಿವಿಧ ರೀತಿಯ ಕ್ಷಿಪಣಿ ವ್ಯವಸ್ಥೆಗಳು, ಲಘು ಯುದ್ಧ ವಿಮಾನಗಳು / ಹೆಲಿಕಾಪ್ಟರ್ಗಳು, ಬಹುಪಯೋಗಿ ಸಾರಿಗೆ ವಿಮಾನಗಳು, ಯುದ್ಧನೌಕೆ ಮತ್ತು ಪೆಟ್ರೋಲ್ ಹಡಗುಗಳು, ಫಿರಂಗಿ ಗನ್ ವ್ಯವಸ್ಥೆಗಳು, ಟ್ಯಾಂಕ್ಗಳನ್ನು, ರಾಡಾರ್ಗಳು, ಮಿಲಿಟರಿ ವಾಹನಗಳು, ಎಲೆಕ್ಟ್ರಾನಿಕ್ ವಾರ್ಫೇರ್ ಸಿಸ್ಟಮ್ಸ್ ಮತ್ತು ಇತರ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಭಾರತ ಹಿಂದೂ ಮಹಾಸಾಗರದ ದೇಶಗಳಿಗೆ ಪೂರೈಸಲು ಸಜ್ಜಾಗಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.