ಬೆಂಗಳೂರು: ಮುಂಬರುವ ವರ್ಷದಿಂದ ರಾಜ್ಯದ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದಂತೆ ಸಮವಸ್ತ್ರಗಳನ್ನು ಜವಳಿ ಇಲಾಖೆಯ ನಿಗಮಗಳಿಂದಲೇ ಒದಗಿಸುವುದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವ ಶ್ರೀಮಂತ ಪಾಟೀಲ ಭರವಸೆ ನೀಡಿದ್ದಾರೆ.
ಸ್ಥಳೀಯ ನೇಕಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ. ಹೊರ ರಾಜ್ಯಗಳಿಂದ ಬಟ್ಟೆಗಳನ್ನು ಆಮದು ಮಾಡುವುದನ್ನು ಕಡಿಮೆ ಮಾಡಿ, ರಾಜ್ಯದ ನೇಕಾರರಿಗೆ ಹೆಚ್ಚು ಅನುಕೂಲವಾಗುವಂತೆ ಪೂರಕ ಕ್ರಮಗಳನ್ನು ಕೈಗೊಳ್ಳಲಿರುವುದಾಗಿಯೂ ಅವರು ತಿಳಿಸಿದ್ದಾರೆ. ಸಮವಸ್ತ್ರಗಳಿಗೆ ಸಂಬಂಧಿಸಿದಂತೆ ಮೂರು ಕೋಟಿ ಮೀಟರ್ಗೂ ಅಧಿಕ ಬಟ್ಟೆಗಳ ಅಗತ್ಯವಿದೆ. ಇದನ್ನು ರಾಜ್ಯದ ನೇಕಾರರಿಂದಲೇ ಪಡೆಯುವ ಕುರಿತು ಯೋಚಿಸಿರುವುದಾಗಿಯೂ ಅವರು ಹೇಳಿದ್ದಾರೆ.
ಮುಂದಿನ ವರ್ಷದಿಂದ ತೊಡಗಿದಂತೆ ಹೊರ ರಾಜ್ಯಗಳಿಂದ ಬಟ್ಟೆ ಖರೀದಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಲಾಗುವುದು. ಈ ಸಂಬಂಧ ತಮಿಳುನಾಡಿನಲ್ಲಿ ಯಾವ ರೀತಿಯಲ್ಲಿ ಸಮವಸ್ತ್ರ ನೀಡಲಾಗುತ್ತಿದೆ ಎಂಬ ಬಗ್ಗೆ ಅಧ್ಯಯನ ನಡೆಸಲು ಜವಳಿ ಆಯುಕ್ತರು ಅಲ್ಲಿಗೆ ತೆರಳಿದ್ದಾರೆ. ಶೀಘ್ರದಲ್ಲೇ ರಾಜ್ಯಕ್ಕೆ ಅವರು ಈ ಸಂಬಂಧ ವರದಿ ನೀಡಲಿದ್ದಾರೆ ಎಂದು ಶ್ರೀಮಂತ ಪಾಟೀಲ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.