ಅಯೋಧ್ಯಾ: ವಿವಾದಿತ ಪ್ರದೇಶ ಅಯೋಧ್ಯೆಯಲ್ಲಿರುವ ರಾಮಲಲ್ಲಾ ದೇಗುಲದ ಹೊದಿಕೆಗಳನ್ನು ದುರಸ್ಥಿಗೊಳಿಸಲು ಮತ್ತು ಆಗಮಿಸುವ ಭಕ್ತರಿಗೆ ಇತರ ಸೌಕರ್ಯಗಳನ್ನು ಒದಗಿಸಲು ಸುಪ್ರೀಂಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಫೈಝಾಬಾದ್ ಜಿಲ್ಲಾಧಿಕಾರಿಯವರು ಇಬ್ಬರು ಸ್ವತಂತ್ರ ವೀಕ್ಷಕರ ಉಸ್ತುವಾರಿಯಲ್ಲಿ ಈ ದುರಸ್ಥಿ ಕಾರ್ಯವನ್ನು ನಡೆಸಬೇಕು ಎಂದು ಸೂಚಿಸಲಾಗಿದೆ.
ರಾಮಲಲ್ಲಾ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ನೀರು, ಶೌಚಾಲಯ ಸೇರಿದಂತೆ ಯಾವ ಕನಿಷ್ಠ ಸೌಲಭ್ಯವೂ ಇಲ್ಲ. ಭಕ್ತರ ಸಮಸ್ಯೆಗೆ ಕೇಂದ್ರ, ಉತ್ತರಪ್ರದೇಶ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಅಲ್ಲಿ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ನೀಡಬೇಕೆಂದು ಕೋರಿ ಬಿಜೆಪಿ ಮುಖಂಡ ಸುಬ್ರಹ್ಮಣ್ಯಮ್ ಸ್ವಾಮಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.
ಇತ್ತೀಚಿಗಷ್ಟೇ ಸುಪ್ರೀಂ ಅಯೋಧ್ಯಾ ಪ್ರದೇಶದಲ್ಲಿ ಉತ್ತಮ ಸೌಕರ್ಯಗಳನ್ನು ಕಲ್ಪಿಸುವಂತೆ ಕೇಂದ್ರ ಮತ್ತು ಉತ್ತರಪ್ರದೇಶ ಸರ್ಕಾರಗಳಿಗೆ ಸೂಚಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.