ನವದೆಹಲಿ: ಮ್ಯಾರಿಟೈಮ್ ಇಂಡಿಯಾ ಸಮಿಟ್ -2021 ರ ಸೈಡ್ಲೈನ್ನಲ್ಲಿ ಭಾರತ ಇಂದು ಚಬಹಾರ್ ದಿನವನ್ನು ಆಚರಿಸಲಿದೆ. ಕಾರ್ಯಕ್ರಮ ವರ್ಚುವಲ್ ಆಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಫ್ಘಾನಿಸ್ಥಾನ, ಅರ್ಮೇನಿಯಾ, ಇರಾನ್, ಕಜಕೀಸ್ಥಾನ್, ರಷ್ಯಾ ಮತ್ತು ಉಜ್ಬೇಕಿಸ್ಥಾನ್ ಸಚಿವರುಗಳು ಭಾಗವಹಿಸಲಿದ್ದಾರೆ.
ಸಚಿವ ಮಟ್ಟದ ಉದ್ಘಾಟನಾ ಅಧಿವೇಶನದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾಷಣ ಮಾಡಲಿದ್ದಾರೆ. ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಮನ್ಸುಖ್ ಮಾಂಡವಿಯಾ ಮುಖ್ಯ ಭಾಷಣ ಮಾಡಲಿದ್ದಾರೆ.
ಮಂತ್ರಿಮಂಡಲ ಮಟ್ಟದ ಆರಂಭಿಕ ಅಧಿವೇಶನದ ನಂತರ ಬಂದರು ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಎರಡು ವೆಬ್ನಾರ್ ಅಧಿವೇಶನಗಳು ನಡೆಯಲಿವೆ. ವ್ಯಾಪಾರ ಪ್ರಚಾರ ಮತ್ತು ಪ್ರಾದೇಶಿಕ ಸಂಪರ್ಕದ ಮೂಲಕ ಅವಕಾಶಗಳನ್ನು ಸಡಿಲಿಸುವುದು ಮತ್ತು ವ್ಯಾಪಾರವನ್ನು ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ನೀಡುವುದು ಇದರ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.