ತಿರುವನಂತಪುರಂ: ಕೇರಳದ ನಿರ್ಣಾಯಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ, ಆಡಳಿತಾರೂಢ ಎಲ್ಡಿಎಫ್ ಸರ್ಕಾರಕ್ಕೆ ಹೈಪ್ರೊಫೈಲ್ ಚಿನ್ನ ಕಳ್ಳಸಾಗಣೆ ಪ್ರಕರಣ ಉರುಳಾಗಿ ಸುತ್ತಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬಳಾದ ಸ್ವಪ್ನಾ ಸುರೇಶ್ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೆಸರನ್ನು ಹೇಳಿದ್ದಾಳೆಎಂದು ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚಿನ್ನ ಮತ್ತು ಡಾಲರ್ ಕಳ್ಳಸಾಗಣೆ ಪ್ರಕರಣಗಳಲ್ಲಿ ಹೆಚ್ಚು ಭಾಗಿಯಾಗಿದ್ದಾರೆ ಎಂದು ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ಕಿಂಗ್ ಪಿನ್ ಸ್ವಪ್ನಾ ಸುರೇಶ್ ಈಗ ಕಸ್ಟಮ್ಸ್ ಇಲಾಖೆಗೆ ಬಹಿರಂಗಪಡಿಸಿದ್ದಾಳೆ. ಈಕೆ ಪಿಣರಾಯಿ ವಿಜಯನ್ ಅವರ ಹಿಂದಿನ ಯುಎಇ ಕಾನ್ಸುಲ್ ಜನರಲ್ನ ನಿಕಟ ಸಂಪರ್ಕವನ್ನು ಹೊಂದಿದ್ದಳು.
ವಿಚಾರಣೆ ವೇಳೆ ಸ್ವಪ್ನಾ ಸುರೇಶ್, ಕೇರಳ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರೊಂದಿಗೆ ಇತರ ಮೂವರು ಕ್ಯಾಬಿನೆಟ್ ಮಂತ್ರಿಗಳು ಸಹ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾಳೆ ಎಂಬುದಾಗಿ ಕಸ್ಟಮ್ಸ್ ಇಲಾಖೆ ಕೇರಳ ಹೈಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.
ಮುಖ್ಯಮಂತ್ರಿ ಮತ್ತು ಕಾನ್ಸುಲೇಟ್ ಜನರಲ್ ನಡುವಿನ ಮಾತುಕತೆಯಲ್ಲಿ ಸ್ವಪ್ನಾ ಸುರೇಶ್ ಮಧ್ಯವರ್ತಿಯಾಗಿದ್ದಳು, ಸಿಎಂಗೆ ಅರೇಬಿಕ್ ಅರ್ಥವಾಗುವುದಿಲ್ಲ ಎಂಬ ಕಾರಣಕ್ಕೆ ಅವಳು ಮಧ್ಯವರ್ತಿಯಾಗಿದ್ದಳು ಎನ್ನಲಾಗಿದೆ. ಈ ಒಪ್ಪಂದದಲ್ಲಿ ಸಿಎಂ ಮತ್ತು ಮಂತ್ರಿಗಳಿಗೆ ಕೋಟ್ಯಂತರ ಹಣವನ್ನು ಕಮಿಷನ್ ಆಗಿ ನೀಡಲಾಗಿದೆ ಎಂದು ಸ್ವಪ್ನಾ ಹೇಳಿಕೆಯಲ್ಲಿ ತಿಳಿಸಿದ್ದಾಳೆ”ಎಂದು ಕಸ್ಟಮ್ಸ್ ಅಫಿಡವಿಟ್ ಕೇರಳ ಹೈಕೋರ್ಟ್ಗೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.