ಬೆಂಗಳೂರು: ಚುನಾವಣಾ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತಡೆಯಲು ಒಂದು ದೇಶ ಒಂದು ಚುನಾವಣೆಯ ಪದ್ಧತಿ ಸಹಕಾರಿ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಅಭಿಪ್ರಾಯಪಟ್ಟರು.
ಬಿಜೆಪಿ ಕರ್ನಾಟಕ ವೃತ್ತಿಪರರ ಪ್ರಕೋಷ್ಠದ ವತಿಯಿಂದ ಭಾನುವಾರ ನಗರದ ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ “ಒಂದು ದೇಶ ಒಂದು ಚುನಾವಣೆ” ಕುರಿತು ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು, ತೇಜಸ್ವಿ ಸೂರ್ಯ ಅವರು ಮಾತನಾಡಿ, ತಮ್ಮಂಥ ಸಾಮಾನ್ಯ ಕಾರ್ಯಕರ್ತರು ಚುನಾವಣೆಯಲ್ಲಿ ಸ್ಪರ್ಧಿಸಲು ಈ ಹೊಸ ಚಿಂತನೆಯು ಸಹಕಾರಿ ಆಗಲಿದೆ ಎಂದು ಅವರು ವಿವರಿಸಿದರು. ಚುನಾವಣಾ ಖರ್ಚು ಕಡಿಮೆಯಾಗಲಿದೆ. ಇದರಿಂದ ದೇಶದ ಅಭಿವೃದ್ಧಿಗೆ ವೇಗ ದೊರಕಲಿದೆ ಎಂದೂ ಅವರು ನುಡಿದರು.
ರಾಜ್ಯದ ಮಾಜಿ ಅಡ್ವೊಕೇಟ್ ಜನರಲ್ ಅಶೋಕ ಹಾರನಹಳ್ಳಿ ಅವರು ಮಾತನಾಡಿ, ಒಂದು ದೇಶ ಒಂದು ಚುನಾವಣೆ ಜಾರಿಗೊಳಿಸಲು ಸಂವಿಧಾನದಲ್ಲಿ ಕೆಲವು ತಿದ್ದುಪಡಿ ಮಾಡಬೇಕಾಗಬಹುದು ಎಂದರು. ಪಕ್ಷಾಂತರ ಕಾಯಿದೆಯಲ್ಲಿ ಕೆಲ ಮಾರ್ಪಾಡು, ಅವಿಶ್ವಾಸ ಗೊತ್ತುವಳಿಯಲ್ಲಿ ಸೂಕ್ತ ಬದಲಾವಣೆ ಹಾಗೂ ಚುನಾವಣಾ ನೀತಿನಿಯಮಗಳಲ್ಲಿ ಕೆಲವು ಬದಲಾವಣೆ ಬೇಕಾಗಬಹುದು ಎಂದು ತಿಳಿಸಿದರು.
ಸಂಸದರಾದ ತೇಜಸ್ವಿ ಸೂರ್ಯ, ರಾಜ್ಯದ ಮಾಜಿ ಅಡ್ವೊಕೇಟ್ ಜನರಲ್ ಅಶೋಕ ಹಾರನಹಳ್ಳಿ, “ಸ್ವರಾಜ್ಯ” ಮ್ಯಾಗಸಿನ್ನ ಸಂಪಾದಕೀಯ ವಿಭಾಗದ ನಿರ್ದೇಶಕರಾದ ಆರ್. ಜಗನ್ನಾಥನ್ ಅವರು ಸಂವಾದದಲ್ಲಿ ಭಾಗವಹಿಸಿದ್ದರು.
ವೃತ್ತಿಪರರ ಪ್ರಕೋಷ್ಠದ ಸಂಚಾಲಕರಾದ ಚನ್ನಮಲ್ಲಿಕಾರ್ಜುನ ಅವರು ಸಂವಾದ ನಡೆಸಿಕೊಟ್ಟರು. ಸಹ ಸಂಚಾಲಕರಾದ ರವಿ ಪೈ ಅವರು ಪ್ರಾಸ್ತಾವಿಕ ಮಾತನಾಡಿದರು.
ಸಂವಾದದಲ್ಲಿ ಪಾಲ್ಗೊಂಡವರು ಒಂದು ದೇಶ ಒಂದು ಚುನಾವಣೆ ಪದ್ಧತಿ ಜಾರಿಗೊಳಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಚಿಂತನೆಯನ್ನು ಶ್ಲಾಘಿಸಿದರಲ್ಲದೆ, ಸೂಕ್ತ ತಿದ್ದುಪಡಿಗಳೊಂದಿಗೆ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲು ಮನವಿ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.