ಬೆಂಗಳೂರು: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ತಲಾ 10 ಮತ್ತು ಉಡುಪಿ ಜಿಲ್ಲೆಯ ತಲಾ 10 ಕಂಬಳಗಳನ್ನು ನಡೆಸುವುದಕ್ಕೆ ಪೂರಕವಾಗುವಂತೆ ತಲಾ 50 ಲಕ್ಷ ರೂ. ಗಳನ್ನು ಉಭಯ ಜಿಲ್ಲೆಗಳಿಗೂ ಒದಗಿಸಲಾಗುವುದು. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಿಗೆ 1 ಕೋಟಿ ರೂ. ಗಳನ್ನು ಮಂಜೂರು ಮಾಡಲಾಗಿದೆ.
ಈ ಮೊತ್ತವನ್ನು ಉದ್ದೇಶಿತ ಕಾರ್ಯಕ್ಕೆ ಮಾತ್ರವೇ ಬಳಕೆ ಮಾಡುವುದು, ಇದನ್ನು ವಿನಿಯೋಗ ಮಾಡಲಾದ ಬಗ್ಗೆ ಲೆಕ್ಕಪತ್ರಗಳನ್ನು ಒದಗಿಸುವುದು, ಅತ್ಯಧಿಕ ಪ್ರವಾಸಿಗರನ್ನು ಆಕರ್ಷಿಸುವ ಕಂಬಳಗಳನ್ನು ಈ ಮೊತ್ತವನ್ನು ನೀಡುವ ಸಲುವಾಗಿ ಆಯ್ಕೆ ಮಾಡುವುದು ಸೇರಿದಮತೆ ಇನ್ನಿತರ ನಿಬಂಧನೆಗಳನ್ನು ಹಾಕಿ ಈ ಸಹಾಯಧನವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಈ ಸಂಬಂಧ ಸಚಿವ ಸಿ ಪಿ ಯೋಗೇಶ್ವರ್ ಟ್ವೀಟ್ ಮಾಡಿದ್ದು, ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.@BSYBJP @nalinkateel @karkalasunil @BjpMangaluru @BJP4Udupi pic.twitter.com/7iKrSwfUZD
— ಸಿ.ಪಿ ಯೋಗೇಶ್ವರ | C.P Yogeeshwara (@CPYogeeshwara) March 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.