ನವದೆಹಲಿ: ಇಂದು ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ಗುರು ಮತ್ತು ಸುಖದೇವ್ ಅವರ ಬಲಿದಾನ ದಿನವಾಗಿದ್ದು, ಅವರ ಅಪ್ರತಿಮ ತ್ಯಾಗಕ್ಕೆ ರಾಷ್ಟ್ರ ಗೌರವ ಸಲ್ಲಿಸುತ್ತಿದೆ.
1931 ರಲ್ಲಿ ಈ ದಿನ, ಬ್ರಿಟಿಷ್ ಆಡಳಿತ ಲಾಹೋರ್ನಲ್ಲಿ ಕ್ರಾಂತಿಕಾರಿ ಚಟುವಟಿಕೆಗಳನ್ನು ನಡೆಸಿದ ಈ ಮೂವರು ಧೀರರನ್ನು ಗಲ್ಲಿಗೇರಿಸಿತ್ತು. ಮರಣದಂಡನೆಗೆ ನಿಗದಿಯಾಗಿದ್ದ ದಿನಾಂಕದ ಒಂದು ದಿನ ಮೊದಲು ಅವರನ್ನು ಗಲ್ಲಿಗೇರಿಸಲಾಯಿತು. ದಿನವನ್ನು ಗುರುತಿಸಲು ಪಂಜಾಬ್ ಮತ್ತು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಶಹೀದ್ ದಿವಸ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರುಗಳಿಗೆ ಗೌರವ ಸಲ್ಲಿಸಿದರು. “ತಾಯಿ ಭಾರತಿಯ ಈ ಮಹಾನ್ ಪುತ್ರರ ತ್ಯಾಗವು ಪ್ರತಿ ಪೀಳಿಗೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ” ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
आजादी के क्रांतिदूत अमर शहीद वीर भगत सिंह, सुखदेव और राजगुरु को शहीदी दिवस पर शत-शत नमन। मां भारती के इन महान सपूतों का बलिदान देश की हर पीढ़ी के लिए प्रेरणास्रोत बना रहेगा। जय हिंद! #ShaheedDiwas pic.twitter.com/qs3SqAHkO9
— Narendra Modi (@narendramodi) March 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.