ನವದೆಹಲಿ: ಅಸ್ಥಿರತೆ, ಭಯೋತ್ಪಾದನೆ ಮತ್ತು ಅಶಾಂತಿಯ ಬದಲಿಗೆ ಭಾರತ ಮತ್ತು ಬಾಂಗ್ಲಾದೇಶ ಎರಡೂ ಸ್ಥಿರತೆ, ಪ್ರೀತಿ ಮತ್ತು ಶಾಂತಿಯನ್ನು ಬಯಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಬಾಂಗ್ಲಾ ಪ್ರವಾಸದಲ್ಲಿದ್ದಾರೆ. ಈ ವೇಳೆ ಅಲ್ಲಿನ ಅಲ್ಲಿನ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮೋದಿ, “ಭಾರತ ಮತ್ತು ಬಾಂಗ್ಲಾದೇಶ ಎರಡೂ ತಮ್ಮದೇ ಆದ ಅಭಿವೃದ್ಧಿಯ ಮೂಲಕ ಜಗತ್ತು ಪ್ರಗತಿಯನ್ನು ಕಾಣಬೇಕೆಂದು ಬಯಸುತ್ತವೆ. ಎರಡೂ ದೇಶಗಳು ಜಗತ್ತಿನಲ್ಲಿ ಅಸ್ಥಿರತೆ, ಭಯೋತ್ಪಾದನೆ ಮತ್ತು ಅಶಾಂತಿಯ ಬದಲು ಸ್ಥಿರತೆ, ಪ್ರೀತಿ ಮತ್ತು ಶಾಂತಿಯನ್ನು ನೋಡಲು ಬಯಸುತ್ತವೆ” ಎಂದಿದ್ದಾರೆ.
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿವೆ ಎಂದು ಪಿಎಂ ಮೋದಿ ಹೇಳಿದ್ದಾರೆ.
“ಎರಡೂ ರಾಷ್ಟ್ರಗಳು ಈ ಸಾಂಕ್ರಾಮಿಕ ರೋಗವನ್ನು ಬಲವಾಗಿ ಎದುರಿಸುತ್ತಿವೆ ಮತ್ತು ಒಟ್ಟಾಗಿ ಹೋರಾಡುತ್ತಿವೆ. ‘ಮೇಡ್ ಇನ್ ಇಂಡಿಯಾ’ ಲಸಿಕೆ ಬಾಂಗ್ಲಾದೇಶದ ನಾಗರಿಕರಿಗೆ ತಲುಪುತ್ತದೆ ಎಂಬ ಕರ್ತವ್ಯವನ್ನು ಪರಿಗಣಿಸಿ ಭಾರತ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಹೇಳಿದರು.
ಹಿಂದೂ ಸಮುದಾಯದ ಆಧ್ಯಾತ್ಮಿಕ ಗುರು ಹರಿಚಂದ್ ಠಾಕೂರ್ ಅವರ ಜನ್ಮಸ್ಥಳವಾದ ಗೋಪಾಲ್ಗಂಜ್ನ ಒರಕಂಡಿಯ ದೇವಸ್ಥಾನವೊಂದರಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪ್ರಧಾನಿ ಮಾಟುವಾ ಸಮುದಾಯದ ಸದಸ್ಯರೊಂದಿಗೆ ಮಾತನಾಡುತ್ತಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.