ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಖೋಬ್ರಮೇಂಡಾ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪೊಲೀಸ್ ಪಡೆಗಳು ಐದು ನಕ್ಸಲ್ರನ್ನು ಯಶಸ್ವಿಯಾಗಿ ಸಂಹಾರ ಮಾಡಿವೆ ಎಂದು ವರದಿಗಳು ತಿಳಿಸಿವೆ.
ಗಡ್ಚಿರೋಲಿಯ ಹೆಟಾಲ್ಕಾಸಾ ಅರಣ್ಯ ಪ್ರದೇಶದಲ್ಲಿ ಶನಿವಾರ ಜಿಲ್ಲಾ ಪೊಲೀಸರು ಇದೇ ರೀತಿಯ ಕಾರ್ಯಾಚರಣೆ ನಡೆಸಿದ್ದರು, ಅದಾದ ನಂತರ ಈ ಕಾರ್ಯಾಚರಣೆ ಆರಂಭವಾಗಿದೆ. “ನಕ್ಸಲ್ ಸಪ್ತಾಹ”ವನ್ನು ನಕ್ಸಲರು ಆಚರಿಸಿದ ಹಿನ್ನೆಲೆಯಲ್ಲಿ ಕಾಡಿನಲ್ಲಿ ನಕ್ಸಲರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಬಗ್ಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು, ಈ ಹಿನ್ನೆಲೆಯಲ್ಲಿ ಪೊಲೀಸ್ ಪಡೆಯ ಸಿ -60 ಕಮಾಂಡೋಗಳು ಕಾರ್ಯಾಚರಣೆ ನಡೆಸಿದರು.
ಕಾರ್ಯಾಚರಣೆಯಲ್ಲಿ ಸುಮಾರು 60-70 ನಕ್ಸಲ್ಗಳು ಕಮಾಂಡೋಗಳ ಮೇಲೆ ಗುಂಡು ಹಾರಿಸಿದರು, ಇದರಿಂದ ಪೊಲೀಸರು ಪ್ರತೀಕಾರ ತೀರಿಸಬೇಕಾಯಿತು. ಸುಮಾರು ಒಂದು ಗಂಟೆ ಕಾಲ ಎರಡೂ ಕಡೆಯಿಂದ ಗುಂಡು ಹಾರಿಸಿದ ನಂತರ, ನಕ್ಸಲರು ಸ್ಥಳದಿಂದ ಪರಾರಿಯಾಗಿದ್ದರು.
ಈ ಕಾರ್ಯಾಚರಣೆಯಲ್ಲಿ ರೈಫಲ್ ಮತ್ತು ಮೂರು ಪ್ರೆಶರ್ ಕುಕ್ಕರ್ ಬಾಂಬ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಿ -60 ಕಮಾಂಡೋಗಳು ಪೊಲೀಸ್ ಪಡೆಗಳ ಸಮರ್ಪಿತ ಮತ್ತು ವಿಶೇಷ ನಕ್ಸಲ್ ವಿರೋಧಿ ಘಟಕವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.