ಜಗದಲ್ಪುರ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನಿನ್ನೆ ನಕ್ಸಲ್ ದಾಳಿಗೆ ಒಳಗಾದ ಛತ್ತೀಸ್ಗಢದ ಜಗದಲ್ಪುರಕ್ಕೆ ಇಂದು ಭೇಟಿ ನೀಡಿದ್ದಾರೆ. ಈ ವೇಳೆ ಅವರು ಹುತಾತ್ಮ ಸೈನಿಕರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಬಳಿಕ ಮಾತನಾಡಿದ ಅವರು, “ನಕ್ಸಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಭದ್ರತಾ ಸಿಬ್ಬಂದಿಗೆ ನಾನು, ಪ್ರಧಾನಿ ಮತ್ತು ಕೇಂದ್ರ ಸರ್ಕಾರ ಮತ್ತು ದೇಶದ ಪರವಾಗಿ ಗೌರವ ಸಲ್ಲಿಸುತ್ತೇನೆ. ನಕ್ಸಲರ ವಿರುದ್ಧದ ಹೋರಾಟವನ್ನು ನಿರ್ಣಾಯಕ ತಿರುವುಗೆ ಕೊಂಡೊಯ್ಯಲು ಅವರು ಮಾಡಿದ ತ್ಯಾಗವನ್ನು ದೇಶ ಯಾವಾಗಲೂ ನೆನಪಿಸಿಕೊಳ್ಳುತ್ತದೆ” ಎಂದಿದ್ದಾರೆ.
“ಈ ಯುದ್ಧವು (ನಕ್ಸಲರ ವಿರುದ್ಧ) ತೀವ್ರಗೊಳ್ಳುತ್ತದೆ ಮತ್ತು ಕೊನೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ದೇಶವಾಸಿಗಳಿಗೆ ಭರವಸೆ ನೀಡಲು ನಾನು ಬಯಸುತ್ತೇನೆ. ಕಳೆದ ಕೆಲವು ವರ್ಷಗಳಲ್ಲಿ ನಾವು ಆಂತರಿಕ ಪ್ರದೇಶಗಳಲ್ಲಿ ಯಶಸ್ವಿಯಾಗಿ ಶಿಬಿರಗಳನ್ನು ಸ್ಥಾಪಿಸಿದ್ದೇವೆ, ಇದು ನಕ್ಸಲರನ್ನು ಚಿಂತೆಗೆ ಒಳಪಡಿಸಿದೆ. ಅದಕ್ಕಾಗಿ ಅವರು ಕುಕೃತ್ಯ ಎಸಗಿದ್ದಾರೆ” ಎಂದಿದ್ದಾರೆ.
“ಬುಡಕಟ್ಟು ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ತೀವ್ರಗೊಳಿಸುವ ಮತ್ತು ಸಶಸ್ತ್ರ ಗುಂಪುಗಳ ವಿರುದ್ಧ ಹೋರಾಡುವ ಎರಡು ರಂಗಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಈ ಘಟನೆಯ ನಂತರ ಛತ್ತೀಸ್ಗಢ ಮತ್ತು ನಕ್ಸಲರ ವಿರುದ್ಧ ಹೋರಾಟ ತೀವ್ರಗೊಳ್ಳುತ್ತದೆ ಎಂದು ನಾನು ಭರವಸೆ ನೀಡುತ್ತೇನೆ” ಎಂದಿದ್ದಾರೆ.
“ನಾನು ಛತ್ತೀಸ್ಗಢ ಸಿಎಂ ಭೂಪೇಶ್ ಬಾಗೇಲ್ ಮತ್ತು ಭದ್ರತಾ ಪಡೆಗಳ ಅಧಿಕಾರಿಗಳೊಂದಿಗೆ ವಿಮರ್ಶೆ ಸಭೆ ನಡೆಸಿದೆ. ಈ ಹೋರಾಟವು ದುರ್ಬಲಗೊಳ್ಳಬಾರದು ಎಂದು ಅಧಿಕಾರಿಗಳು ಹೇಳಿದರು, ಇದು ನಮ್ಮ ಯೋಧರ ಸ್ಥೈರ್ಯ ಹಾಗೇ ಇದೆ ಎಂಬುದನ್ನು ತೋರಿಸುತ್ತದೆ” ಎಂದಿದ್ದಾರೆ
ಕಳೆದ ಕೆಲವು ವರ್ಷಗಳಲ್ಲಿ, ನಕ್ಸಲಿಸಂ ವಿರುದ್ಧದ ಹೋರಾಟವು ನಿರ್ಣಾಯಕ ತಿರುವನ್ನು ತಲುಪಿದೆ ಮತ್ತು ಈ ದುರದೃಷ್ಟಕರ ಘಟನೆಯು ಈ ಹೋರಾಟವನ್ನು ಎರಡು ಹೆಜ್ಜೆ ಮುಂದಕ್ಕೆ ಕೊಂಡೊಯ್ಯಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.