ನವದೆಹಲಿ: ದೇಶದಲ್ಲಿ ಕೋವಿಡ್ -19 ಅನ್ನು ಸವಾಲು ಎದುರಿಸಲು ಸರ್ಕಾರ ಮಾಡುತ್ತಿರುವ ಪ್ರಯತ್ನಗಳಿಗೆ ಭಾರತೀಯ ವಾಯುಪಡೆಯು ಕೈಜೋಡಿಸುತ್ತಿದ್ದು, ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ.
ಸಾಂಕ್ರಾಮಿಕ ರೋಗವನ್ನು ಎದುರಿಸಲು ಸರ್ಕಾರಕ್ಕೆ ಸಹಾಯ ಮಾಡಲು ವಾಯುಸೇನೆ ಈಗ ಆಮ್ಲಜನಕ ಕಂಟೇನರ್, ಆಮ್ಲಜನಕ ಸಿಲಿಂಡರ್, ಅಗತ್ಯ ಔಷಧ, ನಿರ್ಣಾಯಕ ವೈದ್ಯಕೀಯ ಉಪಕರಣಗಳು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಏರ್ಲಿಫ್ಟಿಂಗ್ ಮಾಡುತ್ತೊದೆ.
ದೆಹಲಿಯಲ್ಲಿ ಡಿಆರ್ಡಿಒ ಕೋವಿಡ್ -19 ತಾತ್ಕಾಲಿಕ ಆಸ್ಪತ್ರೆಗೆ ವಾಯುಪಡೆಯು ಕೊಚ್ಚಿ, ಮುಂಬೈ, ವಿಶಾಖಪಟ್ಟಣಂ ಮತ್ತು ಬೆಂಗಳೂರಿನಿಂದ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಯನ್ನು ವಿಮಾನದಲ್ಲಿ ಕರೆ ತಂದಿದೆ.
ದೆಹಲಿಯ ಕೋವಿಡ್ ಕೇಂದ್ರಗಳಿಗೆ ವಾಯುಸೇನೆಯು ಬೆಂಗಳೂರಿನಿಂದ ಡಿಆರ್ಡಿಒ ಆಮ್ಲಜನಕ ಕಂಟೇನರ್ಗಳನ್ನು ವಿಮಾನದಲ್ಲಿ ಸಾಗಿಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಎಲ್ಲಾ ರಕ್ಷಣಾ ಸಂಸ್ಥೆಗಳಿಗೆ ನಿರ್ದೇಶನಗಳನ್ನು ನೀಡಿ, ದೇಶಾದ್ಯಂತದ ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ವಿಸ್ತರಿಸಲು ನಾಗರಿಕ ಅಧಿಕಾರಿಗಳಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದರು.
ನಿವೃತ್ತ ಮಿಲಿಟರಿ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳು ಸ್ವಯಂಸೇವಕರಾಗಿ ಸಹಾಯಕ್ಕಾಗಿ ಸೇರಿಸಿಕೊಳ್ಳಬೇಕೆಂದು ರಕ್ಷಣಾ ಸಚಿವರು ಮನವಿ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.