ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಬಿಜೆಪಿಯ ಶಾಸಕ ಸುವೇಂದು ಅಧಿಕಾರಿ ಅವರು ಆಯ್ಕೆಯಾಗಿದ್ದಾರೆ. ಸುವೇಂದು ನಂದಿಗ್ರಾಮ್ ಕ್ಷೇತ್ರದ ಶಾಸಕರಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಕೀರ್ತಿ ಇವರದ್ದು.
ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯವರನ್ನು ಪ್ರತಿಪಕ್ಷ ನಾಯಕನಾಗಿ ಆಯ್ಕೆಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮತ್ತು ಕೇಂದ್ರ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ಭೂಪೇಂದರ್ ಯಾದವ್ ಭಾಗವಹಿಸಿದ್ದರು.
ನಂದಿಗ್ರಾಮದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯನ್ನು ಸೋಲಿಸಿದ ನಂತರ ಸುವೇಂದು ಅಧಿಕಾರಿಯನ್ನು ಈ ಹುದ್ದೆಗೆ ಪ್ರಮುಖ ಸ್ಪರ್ಧಿಯಾಗಿ ಪರಿಗಣಿಸಲಾಗಿತ್ತು.
ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ನಂದಿಗ್ರಾಮ್ನಲ್ಲಿ ಅವಮಾನಕರ ಸೋಲನ್ನು ಎದುರಿಸಿದ ನಂತರ, ಮಮತಾ ಬ್ಯಾನರ್ಜಿ ಈಗ ಸುವೇಂದು ಅಧಿಕಾರಿಯವರನ್ನು ಮುಂದಿನ ಐದು ವರ್ಷಗಳ ಕಾಲ ವಿರೋಧ ಪಕ್ಷದ ನಾಯಕರಾಗಿ ಎದುರಿಸಬೇಕಾಗುತ್ತದೆ. ಇದು ತನ್ನ ಸ್ಥಾನವನ್ನು ಗೆಲ್ಲಲು ಸಾಧ್ಯವಾಗದ ಸಿಎಂ ಆಗಿ ಬ್ಯಾನರ್ಜಿ ಅವರ ಸೋಲನ್ನು ಅವರಿಗೆ ನಿರಂತರವಾಗಿ ನೆನಪಿಸಿಕೊಡುತ್ತದೆ” ಎಂದಿದ್ದಾರೆ.
Overwhelmed to have been nominated by my Party as the Leader of Opposition in the Bidhan Sabha.
I thank the @BJP4India & @BJP4Bengal Leadership for reposing their faith in me.
Will hold the Govt accountable and defend the rights and interests of the great People of West Bengal. https://t.co/uSjzRBScNO
— Suvendu Adhikari • শুভেন্দু অধিকারী (@SuvenduWB) May 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.