ಬೆಂಗಳೂರು: ರಾಜ್ಯ ಸರ್ಕಾರದ ಲಸಿಕೆ ಖರೀದಿ ಸಂಬಂಧ ಜಾಗತಿಕ ಟೆಂಡರ್ಗೆ ಮುಂದೆ ಬಂದಿದ್ದ ಎರಡು ಕಂಪೆನಿಗಳು ಪೂರಕ ದಾಖಲೆಗಳನ್ನು ಸಕಾಲಕ್ಕೆ ನೀಡದ ಕಾರಣ, ಸರ್ಕಾರವೇ ನೇರವಾಗಿ ಔಷಧ ತಯಾರಿಕಾ ಸಂಸ್ಥೆಯಿಂದಲೇ ಲಸಿಕೆ ಖರೀದಿಸಲಿರುವುದಾಗಿ ಡಿಸಿಎಂ ಡಾ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಈ ಸಂಬಂಧ ಮೇ 15 ರಂದು ಟೆಂಡರ್ ಆಹ್ವಾನ ಮಾಡಲಾಗಿತ್ತು. ಆದರೆ ಟೆಂಡರ್ಗೆ ಅರ್ಜಿ ಹಾಕಿದ್ದ ಕಂಪೆನಿಗಳು ಇದಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ತಯಾರಕರಿಂದಲೇ ನೇರವಾಗಿ ಖರೀದಿ ಮಾಡಲು ಮುಂದಾಗಿದೆ ಎಂದು ಹೇಳಿದ್ದಾರೆ. ಈ ಕಂಪೆನಿಗಳ ಜೊತೆಗೆ ಎರಡು ಬಾರಿ ವರ್ಚುವಲ್ ಸಭೆ ನಡೆಸಲು ಪ್ರಯತ್ನ ಮಾಡಲಾಯಿತಾದರೂ ಅವುಗಳು ಭಾಗವಹಿಸಿಲ್ಲ. ಜೊತೆಗೆ ಲಸಿಕೆ ತಯಾರಿಕಾ ಸಂಸ್ಥೆಗಳ ಜೊತೆಗಿನ ಒಪ್ಪಂದದ ದಾಖಲೆಗಳನ್ನು ಸಲ್ಲಿಸುವಲ್ಲಿಯೂ ಅವು ವಿಫಲವಾದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.
ಜಾಗತಿಕ ಟೆಂಡರ್ ವಿಚಾರವನ್ನು ಕೈಬಿಡಲಾಗಿದ್ದು, ಮುಕ್ತ ಮಾರುಕಟ್ಟೆಯಲ್ಲಿ ನೇರವಾಗಿ ಲಸಿಕೆಗಳನ್ನು ಖರೀದಿಸಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಲಸಿಕೆ ತಯಾರಕ ಜಾಗತಿಕ ಮಟ್ಟದ ಕಂಪೆನಿಗಳಿಗೂ ಸಂದೇಶ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.