ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಅದ್ಭುತ ಸೇವೆ ಸಲ್ಲಿಸಿದ್ದಕ್ಕಾಗಿ ಕರ್ನಾಟಕ ಮೂಲದ ಪ್ರಸ್ತುತ ವೇಲ್ಸ್ನಲ್ಲಿ ವಾಸವಿರುವ ವೈದ್ಯ ಡಾ. ಗಿರಿ ಶಂಕರ್ ಅವರಿಗೆ ಗೌರವ ಎಂಬಿಇ ಪ್ರಶಸ್ತಿ ದೊರೆತಿದೆ.
ಮೂಲತಃ ಬೆಂಗಳೂರಿನವರಾಗಿರುವ ಇವರು ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಯುಕೆಯಲ್ಲಿ ಇನ್ಸಿಡೆಂಟ್ ಡೈರೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆ ಮೂಲಕ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಇವರ ಸೇವೆಯನ್ನು ಮನಗಂಡು ಯುಕೆ ಸರ್ಕಾರ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.
2016 ರಲ್ಲಿ ಗಿರಿ ಶಂಕರ್ ಅವರು ಇಂಗ್ಲೆಂಡ್ನ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಅವರ ದಣಿವರಿಯದ ಸೇವೆಗೆ ಈ ಅರ್ಹ ಗೌರವ ಸಂದಿದೆ. ಈ ಪ್ರಶಸ್ತಿಗೆ ಭಾಜನರಾದ ಡಾ. ಗಿರಿ ಅವರಿಗೆ ಹಲವು ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಹಾಗು ಸಾರ್ವಜನಿಕ ಆರೋಗ್ಯಕ್ಕೆ ಅದ್ಬುತ ಸೇವೆ ಸಲ್ಲಿಸಿದ್ದಕ್ಕಾಗಿ ಗೌರವ MBE ಪ್ರಶಸ್ತಿಯನ್ನು ಪಡೆದ ಕರ್ನಾಟಕ ಮೂಲದ, ವೇಲ್ಸ್ ನಿವಾಸಿ ವೈದ್ಯರಾದ @agmshankar ರವರಿಗೆ ಹೃತ್ಪೂರ್ವಕ ಅಭಿನಂದನೆಗಳು.
The award celebrates the vibrancy of the unique UK-Karnataka #LivingBridge ties. 🇬🇧🇮🇳 https://t.co/BUqLPWDC9T pic.twitter.com/MDv8fF2ZgU
— UK in Bengaluru 🇬🇧 🇮🇳 (@UKinBengaluru) June 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.