ನವದೆಹಲಿ: ಕೊರೋನಾ ಸೋಂಕು ತಡೆಗೆ ಕೆಲ ಕಠಿಣ ನಿರ್ಬಂಧಗಳನ್ನು ರಾಜ್ಯ ಸರ್ಕಾರಗಳು ಕೈಗೊಂಡಿದ್ದು, ಇದೀಗ ಅನ್ಲಾಕ್ ಪ್ರಕ್ರಿಯೆ ಆರಂಭಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎರಡು ನಿರ್ಣಾಯಕ ನಿಯತಾಂಕಗಳನ್ನು ಪಟ್ಟಿ ಮಾಡಿದೆ.
ಅದರಂತೆ ಜಿಲ್ಲೆಗಳಲ್ಲಿ 5% ಗಿಂತ ವಾರದಲ್ಲಿ ಕಡಿಮೆ ಸೋಂಕಿತರ ಪ್ರಮಾಣ ಕಂಡುಬರಬೇಕು. ಜೊತೆಗೆ ಕನಿಷ್ಠ 70% ಗಳಷ್ಟು ದುರ್ಬಲ ಗುಂಪುಗಳಿಗೆ ವ್ಯಾಕ್ಸಿನೇಷನ್ ಪ್ರಕ್ರಿಯೆ ಆಗುವಂತೆ ಗಮನ ಹರಿಸಬೇಕು ಎಂದು ಸೂಚಿಸಿದೆ. ಹಾಗೆಯೇ ಇಃತಹ ಜಿಲ್ಲೆಗಳಲ್ಲೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಎಲ್ಲಾ ಯೋಜನೆ ರೂಪಿಸಿರುವಂತೆಯೂ ಕೇಂದ್ರ ಸರ್ಕಾರ ಹೇಳಿದೆ.
ಭಾರತದಲ್ಲಿ ಕ್ರಮೇಣ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಕಳೆದ 19 ದಿನಗಳಿಂದ ಈ ಬದಲಾವಣೆ ಕಂಡುಬರುತ್ತಿದೆ. ಮಂಗಳವಾರ 1,27,510 ಸೋಂಕಿತರ ಪ್ರಕರಣಗಳು ಕಂಡು ಬಂದಿದ್ದು, ಕಳೆದ 51 ದಿನಗಳಲ್ಲಿ ಇದು ಕನಿಷ್ಟ ಸಂಖ್ಯೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,81,75,044 ಆಗಿದ್ದು, ಸಾವಿಗೀಡಾದವರ ಸಂಖ್ಯೆ 3,31,895 ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520 ಕ್ಕೆ ಇಳಿಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.